ಕುಂದಾಪುರ

ಕನಕ ಜಗದೀಶ್ ಶೆಟ್ಟಿಗೆ ವಿದ್ಯಾ ಪೋಷಕ ರತ್ನ ಪ್ರಶಸ್ತಿ

Share

Advertisement
Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳಿಂದ ದತ್ತು ತೆಗೆದು ಕೊಂಡು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿರುವ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರನ್ನು ಜ.13 ರಂದು ಶಾಲೆಯಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳ ಪೋಷಕ ವೃಂದದವರ ವತಿಯಿಂದ ವಿದ್ಯಾ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Advertisement

ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಉದ್ಯಮಿ:ನಾವುಂದ 5.ಸೆಂಟ್ಸ್ ಕಾಲೋನಿಯಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನರ ಶಾಲೆಯಲ್ಲಿ 5ನೇ ತರಗತಿ ವರೆಗೆ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದ್ದು ಪ್ರಸ್ತುತ 57 ವಿದ್ಯಾರ್ಥಿಗಳು ಓದುತ್ತಿದ್ದಾರೆ.ಕಾಲೋನಿಯ ಮಕ್ಕಳೆ ಹೆಚ್ಚಾಗಿ ಬರುವ ಕೋಯಾನಗರ ಶಾಲೆಯನ್ನು ಕನಕ ಗ್ರೂಪ್ ಉದ್ಯಮಿ ಜಗದೀಶ್ ಶೆಟ್ಟಿ ಕುದ್ರಕೋಡು ಅವರು ಕಳೆದ ಎಂಟು ವರ್ಷಗಳ ಹಿಂದೆಯೇ ದತ್ತು ಸ್ವೀಕಾರ ಮಾಡಿ ಶಾಲೆಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸುವುದರ ಮುಖೇನ ಅತಿಥಿ ಶಿಕ್ಷಕರ ಸಂಬಳ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಿಕ್ಷಾ ವ್ಯವಸ್ಥೆ ಸಹಿತ ತಿಂಗಳಿಗೆ 20,000.ರೂ ಅನ್ನು ವಿನಿಯೋಗ ಮಾಡುತ್ತಿದ್ದಾರೆ.ಪ್ರತಿ ವರ್ಷ ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡುವುದರ ಜತೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲೆಯಲ್ಲಿ ಸ್ಥಾಪನೆ ಮಾಡಿದ್ದಾರೆ.

ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಕನಕ ಗ್ರೂಪ್ ಜಗದೀಶ ಶೆಟ್ಟಿ ಕುದ್ರಕೋಡು ಮಾತನಾಡಿ,ಇಂಗ್ಲಿಷ್ ಶಿಕ್ಷಣದ ಮೇಲಿನ ವ್ಯಾಮೋಹ ಮತ್ತು ಆಧುನಿಕ ಜೀವನ ಶೈಲಿಗೆ ಮಾರು ಹೋಗಿದ್ದರಿಂದ ಇಂದು ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಶಾಲೆಗಳು ಬಾಗಿಲು ಹಾಕುವ ಸ್ಥಿತಿಗೆ ಬಂದು ತಲುಪಿದೆ.ಆದರೆ ಯಾವುದೇ ವ್ಯವಸ್ಥೆಯನ್ನು ಅನುಭವಿಸಲು ಸಾಧ್ಯವಿಲ್ಲದ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಸರಕಾರಿ ಶಾಲೆಗಳ ಬಾಗಿಲು ಸದಾ ತೆರೆದಿರಬೇಕು ಎಂದು ಹೇಳಿದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಮಾತನಾಡಿ,ಪ್ರತಿಯೊಬ್ಬ ಉದ್ಯಮಿ ಕೂಡ ತನ್ನ ಊರಿನಲ್ಲಿರುವ ಶಾಲೆಯನ್ನು ದತ್ತು ತೆಗೆದುಕೊಳ್ಳುವುದರ ಮೂಲಕ ಊರಿನ ಮಕ್ಕಳ ಶಿಕ್ಷಣೆಕ್ಕೆ ಪ್ರೋತ್ಸಾಹ ನೀಡಬೇಕು.ಸರಕಾರಿ ಶಾಲೆಗಳು ಉಳಿದರೆ ಮಾತ್ರ ಬಡ ಮಕ್ಕಳು ಶಿಕ್ಷಣವಂತರಾಗಲು ಸಾಧ್ಯ ಎಂದರು.

ವರದಿ: ಜಗದೀಶ ದೇವಾಡಿಗ ಮುಳ್ಳಿಕಟ್ಟೆ

[8:35 pm, 12/01/2024] At Work: ಪ್ರೋತ್ಸಾಹ
[8:35 pm, 12/01/2024] At Work: ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ,

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago