ಜ.16 ರಂದು ಗುಡ್ಡಮ್ಮಾಡಿ ಷಷ್ಠಿ ಮಹೋತ್ಸವ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಶ್ರೀಕ್ಷೇತ್ರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ಜ.16 ಮತ್ತು ಜ.17 ರಂದು ನಡೆಯಲಿದೆ.ಜ.14 ರಂದು ಸಂಕ್ರಾತಿ ಪೂಜೆ ನೆರವೇರಲಿದೆ.ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಜ.16 ರಂದು ಮಂಗಳವಾರ ಬೆಳಿಗ್ಗೆ ಗಣಪತಿ ಪ್ರಾರ್ಥನೆ,ನವಕಲಶಾಭಿಷೇಕ,10.30 ರಿಂದ ಮಡೆ ಪ್ರದಕ್ಷಿಣೆ,ಶ್ರೀನಾಗ ದರ್ಶನ,ಬ್ರಾಹ್ಮಣ ಸಂತರ್ಪಣೆ ಸಂಜೆ 4ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆ ಜರುಗಲಿದೆ.ಜ.17 ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಹಾಲಿಟ್ಟು ಸೇವೆ.9.30ಕ್ಕೆ ನಾಗಮಂಡಲೋತ್ಸವ,ಬೆಳಿಗ್ಗೆ 11 ರಿಂದ ತುಲಾಭಾರ ಸೇವೆ ಸೇವೆ ಜರುಗಲಿದೆ.ಹಣ್ಣುಕಾಯಿ,ಮಂಗಳಾರತಿ ಸೇವೆ,ಹರಿವಾಣ ನೈವೇದ್ಯ,ಹರಕೆ ಸೇವೆ ನಡೆಯಲಿದೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಅರುಣಕುಮಾರ್ ಶೆಟ್ಟಿ ತಿಳಿಸಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page