ಕುಂದಾಪುರ

ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಸಮುದಾಯ ಭವನ ಉದ್ಘಾಟನೆ

Share

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಣೆಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದರು ಶ್ರೀ ಜಟ್ಟಿಗೇಶ್ವರ ಸಮುದಾಯ ಭವನವದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು.ಸಭಾಭವನದ ನಿರ್ಮಾಣಕ್ಕೆ ಧನಸಾಹಯ ಮಾಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಮಕರ ಸಂಕ್ರಮಣದ ಅಂಗವಾಗಿ ಶ್ರೀಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿಯ ವಾರ್ಷಿಕ ಹಾಲು ಹಬ್ಬ ನಡೆಯಿತು.ಅನ್ನದಾನ ಸೇವೆ ಜರುಗಿತು.ಕುಂದಾಪುರ,ಬೈಂದೂರು ತಾಲೂಕು ಸೇರಿದಂತೆ ಇತರ ಜಿಲ್ಲೆಗಳಿಂದ ಭಕ್ತರು ದೈವದ ಮನೆಗೆ ಆಗಮಿಸಿ ಹರಕೆಯನ್ನು ಸಲ್ಲಿಸಿದರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಕರಾವಳಿ ಭಾಗದಲ್ಲಿ ಜಾತಿ ಧರ್ಮ ರಾಜಕೀಯ ಹೆಸರಿನಲ್ಲಿ ಜನರನ್ನು ಒಗ್ಗೂಡಿಸುವುದು ಕಷ್ಟ ಆದರೆ ದೈವ ದೇವಸ್ಥಾನದ ವಿಚಾರದಲ್ಲಿ ಇಲ್ಲಿನ ಜನರು ಒಗ್ಗಟ್ಟಿನಿಂದ ಮುಂದೆ ಸಾಗುತ್ತಾರೆ ಎನ್ನುವುದಕ್ಕೆ ದೈವ ದೇವಸ್ಥಾನಗಳು ಅಭಿವೃದ್ಧಿ ಹೊಂದಿರುವುದೆ ಸಾಕ್ಷಿ ಆಗಿದೆ.ನಮ್ಮ ಸಂಸ್ಕøತಿ ಆಚಾರ ವಿಚಾರಗಳನ್ನು ಹಿರಿಯರು ಯುವ ಪೀಳಿಗೆಗೆ ಒಪ್ಪಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಶ್ರೀಜಟ್ಟಿಗೇಶ್ವರ ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದ ಅಧ್ಯಕ್ಷ ಬಾಬು.ಕೆ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,ದೈವ ಸ್ಥಾನವನ್ನು ನಂಬಿದ ಭಕ್ತರು ಮತ್ತು ದಾನಿಗಳ ಸಹಕಾರದಿಂದ ಅಜೀರ್ಣ ಅವಸ್ಥೆಯಲ್ಲಿದ್ದ ದೈವಸ್ಥಾನದ ಜೀರ್ಣೋದ್ಧಾರ ಸಹಿತ,ಸಭಾಭವನ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.ನಮ್ಮ ದೇವಸ್ಥಾನದಲ್ಲಿ ಸುಮಾರು 35 ದೈವಗಳಿದ್ದು ಪ್ರತಿಯೊಂದು ದೈವದಲ್ಲಿ ಒಂದೊಂದು ರೀತಿ ಶಕ್ತಿ ಅಡಗಿದೆ.ಕಷ್ಟವೆಂದು ಬಂದ ಭಕ್ತರ ಇಷ್ಟಾರ್ಥವನ್ನು ಸಿದ್ಧಿಸುವ ಕಾರಣಿಕ ಶಕ್ತಿಯನ್ನು ನಮ್ಮ ಶ್ರೀಜಟ್ಟಿಗೇಶ್ವರ ಮತ್ತು ಶ್ರೀಭದ್ರಮಹಾಂಕಾಳಿ ಅಮ್ಮನವರ ಶಕ್ತಿ ಅಪಾರವಾದದ್ದು ಎಂದು ಹೇಳಿದರು.ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ರಸ್ತೆಯನ್ನು ಅಭಿವೃದ್ಧಿ ಪಡಿಸಲು ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕೆಂದು ವಿನಂತಿಸಿಕೊಂಡರು.

ಎಪಿಎಂಸಿ ನಿಕಟ ಪೂರ್ವ ಉಪಾಧ್ಯಕ್ಷ ಕೃಷ್ಣ ಪೂಜಾರಿ ಮಾತನಾಡಿ,ಬಾಬು ಜೆ ಪೂಜಾರಿ ಮತ್ತು ಸಮಿತಿ ಅವರ ನೇತೃತ್ವದಲ್ಲಿ ಕಳೆದ 6 ವರ್ಷಗಳಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ.ನನ್ನ ಕೈಲಾದಷ್ಟು ಸಹಾಯವನ್ನು ಮಾಡಲಾಗಿದ್ದು ನನಗೆ ದೇವರು ಕೊಟ್ಟಿರುವುದನ್ನು ಕಾಣಿಕೆ ರೂಪದಲ್ಲಿ ಒಂದಿಷ್ಟು ಮೊತ್ತವನ್ನು ದೇವರಿಗೆ ಸಮರ್ಪಿಸಿದ್ದೇನೆ ಎಂದರು.ಶ್ರೀಜಟ್ಟಿಗೇಶ್ವರ ಸ್ವಾಮಿ ಸರ್ವರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.

ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ,ಕೆ.ಗೋಪಾಲ ಪೂಜಾರಿ,ವಿದ್ಯಾಧರ ಗುರೂಜಿ ಶಿರಸಿ ಶುಭಹಾರೈಸಿದರು.ಗುಜ್ಜಾಡಿ ಗ್ರಾ.ಪಂ ಸದಸ್ಯ ಹರೀಶ್ ಮೇಸ್ತ,ಸದಾನಂದ ಪೂಜಾರಿ,ರಾಮ ಪೂಜಾರಿ,ದುಗ್ಗಪ್ಪ ಪೂಜಾರಿ,ಬಿ.ಮಹಾಬಲ ದೇವಾಡಿಗ,ಎಪಿಎಂಸಿ ಸದಸ್ಯ ಕೃಷ್ಣ ಪೂಜಾರಿ,ಎಸ್.ಕೆ ಪೂಜಾರಿ,ಆರತಿ ಪೂಜಾರಿ ಯಡಕಂಠ,ಮಾಧವ ಪೂಜಾರಿ ಬಡಾಕೆರೆ,ಅಚ್ಚುತ ನಾಯಕವಾಡಿ,ಅನಂತ ಖಾರ್ವಿ,ಪ್ರಾತ್ರಿಗಳಾದ ನಾರಾಯಣ ಪೂಜಾರಿ,ಗ್ರಾಮಸ್ಥರು,ದೇವಸ್ಥಾನದ ಅರ್ಚಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.ಬಾಬು.ಕೆ ಪೂಜಾರಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ದೈಹಿಕ ಶಿಕ್ಷಕ ಗುರುರಾಜ ವಂದಿಸಿದರು.

ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಸನ್ನಪ್ರಸಾದವನ್ನು ಸ್ವೀಕರಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago