ಕುಂದಾಪುರ

ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ

Share

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು
ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ,ಪ್ರಧಾನಹೋಮ,ನವಕಲಶಾಭಿಷೇಕ,ಕಲಶಾಭಿಷೇಕ,ಹರಿವಾಣ ನೆವೇದ್ಯ ಸೇವೆ,ಮಡೆ ಪ್ರದಕ್ಷಿಣೆ,ಶ್ರೀನಾಗದರ್ಶನ,ಬ್ರಾಹ್ಮಣ ಸಂತರ್ಪಣೆ ಮತ್ತು ಸಾರ್ವಜನಿಕ ಪ್ರಸಾದ ವಿತರಣೆ,ಗಣಪತಿ ಪ್ರಾರ್ಥನೆ ಜರುಗಿತು.ಕುಂದಾಪುರ ಮತ್ತು ಬೈಂದೂರು ತಾಲೂಕಿನ ಜನರು ಸೇರಿದಂತೆ ಘಟ್ಟದ ಮೇಲಿನ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು,ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ತೀರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ್ ಶೆಟ್ಟಿ,ಅರ್ಚಕರು,ಗ್ರಾಮಸ್ಥರು,ಸ್ವಯಂಸೇವಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಸುಬ್ರಹ್ಮಣ್ಯ ದೇವ -ಮಡೆ ಪ್ರದಕ್ಷಿಣೆ
ಕುಂದಾಪುರ ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಅಂಗವಾಗಿ ಮಡೆ ಪ್ರದಕ್ಷಿಣೆ ಮಂಗಳವಾರ ನಡೆಯಿತು.ಸಂಕಷ್ಟದ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಭಕ್ತರು ಸಲ್ಲಿಕೆ ಮಾಡಿದರು.

ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರ ಬೆಳ್ಳಿ ಮೂರ್ತಿಯ ಉತ್ಸವ ಸೇವೆ ಮಂಗಳವಾರ ನಡೆಯಿತು.ಈ ಸದಂರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.

ನಾಳೆ ನಾಗಮಂಡಲ ಸೇವೆ:ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಬುಧವಾರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಾಲಿಟ್ಟು ಸೇವೆ,ನಾಗಮಂಡಲ ಸೇವೆ,ತುಲಾಭಾರ ಸೇವೆ,ಮಂಗಳಾರತಿ,ಹಣ್ಣುಕಾಯಿ,ಹರಿವಾಣ ನೈವೇದ್ಯ ಸೇವೆ ನಡೆಯಲಿದೆ.
ಶ್ರೀಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನ ಗುಡ್ಡಮ್ಮಾಡಿ ಅನುಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ ಮಾತನಾಡಿ,ಕರಾವಳಿ ಭಾಗದಲ್ಲಿ ಬಹಳಷ್ಟು ಖ್ಯಾತಿಯನ್ನು ಹೊಂದಿರುವ ಸಂತಾನಕಾರಕನೆಂದೆ ಪ್ರಸಿದ್ಧಿ ಪಡೆದಿರುವ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ.ಚರ್ಮ ರೋಗ ನಿವಾರಣೆ,ಸಂತಾನ ಭಾಗ್ಯಕ್ಕಾಗಿ,ಜೀವನದ ಶ್ರೇಯಸ್ಸಿಗಾಗಿ ಹೇಳಿಕೊಂಡ ಹರಕೆಯನ್ನು ಭಕ್ತರು ಸಲ್ಲಿಕೆಮಾಡಿದ್ದಾರೆ.ಶ್ರೀಸುಹ್ಮಣ್ಯ ದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago