ಕುಂದಾಪುರ

ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು
ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ,ಪ್ರಧಾನಹೋಮ,ನವಕಲಶಾಭಿಷೇಕ,ಕಲಶಾಭಿಷೇಕ,ಹರಿವಾಣ ನೆವೇದ್ಯ ಸೇವೆ,ಮಡೆ ಪ್ರದಕ್ಷಿಣೆ,ಶ್ರೀನಾಗದರ್ಶನ,ಬ್ರಾಹ್ಮಣ ಸಂತರ್ಪಣೆ ಮತ್ತು ಸಾರ್ವಜನಿಕ ಪ್ರಸಾದ ವಿತರಣೆ,ಗಣಪತಿ ಪ್ರಾರ್ಥನೆ ಜರುಗಿತು.ಕುಂದಾಪುರ ಮತ್ತು ಬೈಂದೂರು ತಾಲೂಕಿನ ಜನರು ಸೇರಿದಂತೆ ಘಟ್ಟದ ಮೇಲಿನ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು,ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ತೀರಿಸಿದರು.

Advertisement

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ್ ಶೆಟ್ಟಿ,ಅರ್ಚಕರು,ಗ್ರಾಮಸ್ಥರು,ಸ್ವಯಂಸೇವಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಸುಬ್ರಹ್ಮಣ್ಯ ದೇವ -ಮಡೆ ಪ್ರದಕ್ಷಿಣೆ
ಕುಂದಾಪುರ ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಅಂಗವಾಗಿ ಮಡೆ ಪ್ರದಕ್ಷಿಣೆ ಮಂಗಳವಾರ ನಡೆಯಿತು.ಸಂಕಷ್ಟದ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಭಕ್ತರು ಸಲ್ಲಿಕೆ ಮಾಡಿದರು.

ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರ ಬೆಳ್ಳಿ ಮೂರ್ತಿಯ ಉತ್ಸವ ಸೇವೆ ಮಂಗಳವಾರ ನಡೆಯಿತು.ಈ ಸದಂರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.

ನಾಳೆ ನಾಗಮಂಡಲ ಸೇವೆ:ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಬುಧವಾರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಾಲಿಟ್ಟು ಸೇವೆ,ನಾಗಮಂಡಲ ಸೇವೆ,ತುಲಾಭಾರ ಸೇವೆ,ಮಂಗಳಾರತಿ,ಹಣ್ಣುಕಾಯಿ,ಹರಿವಾಣ ನೈವೇದ್ಯ ಸೇವೆ ನಡೆಯಲಿದೆ.
ಶ್ರೀಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನ ಗುಡ್ಡಮ್ಮಾಡಿ ಅನುಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ ಮಾತನಾಡಿ,ಕರಾವಳಿ ಭಾಗದಲ್ಲಿ ಬಹಳಷ್ಟು ಖ್ಯಾತಿಯನ್ನು ಹೊಂದಿರುವ ಸಂತಾನಕಾರಕನೆಂದೆ ಪ್ರಸಿದ್ಧಿ ಪಡೆದಿರುವ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ.ಚರ್ಮ ರೋಗ ನಿವಾರಣೆ,ಸಂತಾನ ಭಾಗ್ಯಕ್ಕಾಗಿ,ಜೀವನದ ಶ್ರೇಯಸ್ಸಿಗಾಗಿ ಹೇಳಿಕೊಂಡ ಹರಕೆಯನ್ನು ಭಕ್ತರು ಸಲ್ಲಿಕೆಮಾಡಿದ್ದಾರೆ.ಶ್ರೀಸುಹ್ಮಣ್ಯ ದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಹಾರೈಸಿದರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago