ಕುಂದಾಪುರ

ಇತಿಹಾಸ ಪ್ರಸಿದ್ಧ ಶ್ರೀ ಜೈನ ಶೇಡಿಬೀರ ನಾಗ ಪರಿವಾರ ದೈವಸ್ಥಾನ ಶಿರೂರು ವಾರ್ಷಿಕ ಜಾತ್ರಾ ಮಹೋತ್ಸವ

Share

Advertisement
Advertisement

ಬೈಂದೂರು:ತಾಲೂಕಿನ ಶಿರೂರು ಶ್ರೀ ಜೈನ ಶೇಡಿಬೀರ ನಾಗ ಪರಿವಾರ ದೈವಸ್ಥಾನದ ವಾರ್ಷಿಕ ಹಾಲು ಹಬ್ಬ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.
ಅನಾದಿ ಕಾಲದಿಂದಲೂ ನಡೆದು ಬಂದ ಪದ್ಧತಿ ಅಂತೆ ಜೈನ ಶೇಡಿಬೀರ ದೇವರಿಗೆ ಸಮರ್ಪಿಸುವ ಚಿನ್ನಾಭರಣವನ್ನು
ಆರ್ಮಕ್ಕಿ ಮನೆಯಿಂದ ವೈಭವದ ಮೆರವಣಿಗೆ ಮೂಲಕ ತರಲಾಗುತ್ತದೆ.ಪೂಜೆ ಸಲ್ಲಿಸಿ ದೇವರಿಗೆ ಚಿನ್ನಾಭರಣವನ್ನು ತೋಡಿಸುವುದರ ಮೂಲಕ ವಾರ್ಷಿಕವಾಗಿ ನಡೆಯುವ ಜಾತ್ರೆಗೆ ಚಾಲನೆ ಸಿಗುತ್ತದೆ.ಜೈನ ಶೇಡಿಬೀರ ದೇವರಿಗೆ ಸಮರ್ಪಿಸುವ ಚಿನ್ನವನ್ನು ಆರ್ಮಕ್ಕಿ ಮನೆಯಲ್ಲಿ ಪೂಜಿಸಿ, ಸಿಹಿಯನ್ನು ವಿತರಿಸುವ ಪದ್ಧತಿಯೂ ಇದೆ.

Advertisement

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶರತ್ ಶೆಟ್ಟಿ ಮಾತನಾಡಿ,ಶಿರೂರು ಗ್ರಾಮದ ಗ್ರಾಮ ದೇವರಾದ ಶ್ರೀ ಜೈನ ಶೇಡಿಬೀರ ಜಾತ್ರಾ ಮಹೋತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ.ನಂಬಿದ ಕುಟುಂಬಸ್ಥರು ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಸಲ್ಲಿಸಿ ದೇವರ ದರ್ಶನವನ್ನು ಪಡೆಯುತ್ತಾರೆ.ಕಟ್ಟುಕಟ್ಟಲೆ ಅಂತೆ ಆರ್ಮಕ್ಕಿ ಮನೆಯಿಂದ ದೇವರಿಗೆ ತೋಡಿಸುವ ಚಿನ್ನವನ್ನು ಮೆರವಣಿಗೆ ಮೂಲಕ ತಂದು ತೋಡಿಸುವ ಪದ್ಧತಿ ಇದೆ ಎಂದು ಹೇಳಿದರು.ದೇವಸ್ಥಾನದಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳು ಬಾಕಿ ಇದ್ದು ದಾನಿಗಳು,ನಂಬಿದ ಭಕ್ತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.

ದೇವಸ್ಥಾನದ ಕಾರ್ಯದರ್ಶಿ ಆರ್ಮಕ್ಕಿ ರವೀಂದ್ರ ಶೆಟ್ಟಿ ಮಾತನಾಡಿ,ಆರ್ಮಕ್ಕಿ ಮನೆಯವರ ಮುಂದಾಳತ್ವ ಹಾಗೂ ಗ್ರಾಮಸ್ಥರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜೈನ ಶೇಡಿಬೀರ ನಾಗ ಪರಿವಾರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತದೆ ಎಂದರು.ಜಾತ್ರೆಯ ಅಂಗವಾಗಿ ಗೆಂಡಸೇವೆ ಅನ್ನದಾನ ಸೇವೆ ಹಾಗೂ ವಿಶೇಷಯನ್ನು ಪೂಜೆ ದೇವರಿಗೆ ಸಲ್ಲಿಸಲಾಯಿತು ಎಂದು ಹೇಳಿದರು.

ಸುಕೇಶ್ ಶೆಟ್ಟಿ ಆರ್ಮಕ್ಕಿ ಮಾತನಾಡಿ,ಇತಿಹಾಸ ಪ್ರಸಿದ್ಧ ಶಿರೂರು ಜಾತ್ರೆ ಸಂಪ್ರದಾಯ ಬದ್ಧವಾಗಿ ಕಟ್ಟು ಕಟ್ಟಲೇ ಅಂತೆ ನಡೆಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್ಮಕ್ಕಿ ಮನೆಯವರು, ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.
ಅಶ್ವಿನಿ ರೋಹನ್ ಶೆಟ್ಟಿ ಉಮ್ಮಣ್ಣ ಶೆಟ್ರ ಮನೆ ಶಿರೂರು ಅನ್ನದಾನ ಸೇವೆ ನೆರವೇರಿಸಿದರು.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago