ಕುಂದಾಪುರ

ಇತಿಹಾಸ ಪ್ರಸಿದ್ಧ ಶ್ರೀ ಜೈನ ಶೇಡಿಬೀರ ನಾಗ ಪರಿವಾರ ದೈವಸ್ಥಾನ ಶಿರೂರು ವಾರ್ಷಿಕ ಜಾತ್ರಾ ಮಹೋತ್ಸವ

Share

ಬೈಂದೂರು:ತಾಲೂಕಿನ ಶಿರೂರು ಶ್ರೀ ಜೈನ ಶೇಡಿಬೀರ ನಾಗ ಪರಿವಾರ ದೈವಸ್ಥಾನದ ವಾರ್ಷಿಕ ಹಾಲು ಹಬ್ಬ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.
ಅನಾದಿ ಕಾಲದಿಂದಲೂ ನಡೆದು ಬಂದ ಪದ್ಧತಿ ಅಂತೆ ಜೈನ ಶೇಡಿಬೀರ ದೇವರಿಗೆ ಸಮರ್ಪಿಸುವ ಚಿನ್ನಾಭರಣವನ್ನು
ಆರ್ಮಕ್ಕಿ ಮನೆಯಿಂದ ವೈಭವದ ಮೆರವಣಿಗೆ ಮೂಲಕ ತರಲಾಗುತ್ತದೆ.ಪೂಜೆ ಸಲ್ಲಿಸಿ ದೇವರಿಗೆ ಚಿನ್ನಾಭರಣವನ್ನು ತೋಡಿಸುವುದರ ಮೂಲಕ ವಾರ್ಷಿಕವಾಗಿ ನಡೆಯುವ ಜಾತ್ರೆಗೆ ಚಾಲನೆ ಸಿಗುತ್ತದೆ.ಜೈನ ಶೇಡಿಬೀರ ದೇವರಿಗೆ ಸಮರ್ಪಿಸುವ ಚಿನ್ನವನ್ನು ಆರ್ಮಕ್ಕಿ ಮನೆಯಲ್ಲಿ ಪೂಜಿಸಿ, ಸಿಹಿಯನ್ನು ವಿತರಿಸುವ ಪದ್ಧತಿಯೂ ಇದೆ.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಶರತ್ ಶೆಟ್ಟಿ ಮಾತನಾಡಿ,ಶಿರೂರು ಗ್ರಾಮದ ಗ್ರಾಮ ದೇವರಾದ ಶ್ರೀ ಜೈನ ಶೇಡಿಬೀರ ಜಾತ್ರಾ ಮಹೋತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ.ನಂಬಿದ ಕುಟುಂಬಸ್ಥರು ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಸಲ್ಲಿಸಿ ದೇವರ ದರ್ಶನವನ್ನು ಪಡೆಯುತ್ತಾರೆ.ಕಟ್ಟುಕಟ್ಟಲೆ ಅಂತೆ ಆರ್ಮಕ್ಕಿ ಮನೆಯಿಂದ ದೇವರಿಗೆ ತೋಡಿಸುವ ಚಿನ್ನವನ್ನು ಮೆರವಣಿಗೆ ಮೂಲಕ ತಂದು ತೋಡಿಸುವ ಪದ್ಧತಿ ಇದೆ ಎಂದು ಹೇಳಿದರು.ದೇವಸ್ಥಾನದಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳು ಬಾಕಿ ಇದ್ದು ದಾನಿಗಳು,ನಂಬಿದ ಭಕ್ತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.

ದೇವಸ್ಥಾನದ ಕಾರ್ಯದರ್ಶಿ ಆರ್ಮಕ್ಕಿ ರವೀಂದ್ರ ಶೆಟ್ಟಿ ಮಾತನಾಡಿ,ಆರ್ಮಕ್ಕಿ ಮನೆಯವರ ಮುಂದಾಳತ್ವ ಹಾಗೂ ಗ್ರಾಮಸ್ಥರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜೈನ ಶೇಡಿಬೀರ ನಾಗ ಪರಿವಾರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತದೆ ಎಂದರು.ಜಾತ್ರೆಯ ಅಂಗವಾಗಿ ಗೆಂಡಸೇವೆ ಅನ್ನದಾನ ಸೇವೆ ಹಾಗೂ ವಿಶೇಷಯನ್ನು ಪೂಜೆ ದೇವರಿಗೆ ಸಲ್ಲಿಸಲಾಯಿತು ಎಂದು ಹೇಳಿದರು.

ಸುಕೇಶ್ ಶೆಟ್ಟಿ ಆರ್ಮಕ್ಕಿ ಮಾತನಾಡಿ,ಇತಿಹಾಸ ಪ್ರಸಿದ್ಧ ಶಿರೂರು ಜಾತ್ರೆ ಸಂಪ್ರದಾಯ ಬದ್ಧವಾಗಿ ಕಟ್ಟು ಕಟ್ಟಲೇ ಅಂತೆ ನಡೆಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರ್ಮಕ್ಕಿ ಮನೆಯವರು, ಗ್ರಾಮಸ್ಥರು, ಭಕ್ತಾದಿಗಳು ಉಪಸ್ಥಿತರಿದ್ದರು.
ಅಶ್ವಿನಿ ರೋಹನ್ ಶೆಟ್ಟಿ ಉಮ್ಮಣ್ಣ ಶೆಟ್ರ ಮನೆ ಶಿರೂರು ಅನ್ನದಾನ ಸೇವೆ ನೆರವೇರಿಸಿದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

4 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago