ಕುಂದಾಪುರ

ಹೆಮ್ಮಾಡಿ:ಆರ್ಯ ಬಿಲ್ಡ್ ಕೇರ್ ನೂತನ ಸಂಸ್ಥೆ ಉದ್ಘಾಟನೆ

Share

ಬೈಂದೂರು:ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ನೂತನ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ಸೋಮವಾರ ನಡೆಯಿತು.ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ.

ಎಮಿಯೆಂಟೆಕ್ ಸಿಎಂಡಿ ಸಿಜಿತ್ ಆರ್ಯ ಬಿಲ್ಡ್ ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಸಾರ್ವಿನ್ ಪ್ಲಾಸ್ಟ್ ಎನ್ನುವುದು ಜಿಪ್ಸಮ್ ಆಗಿದ್ದು,ಮನೆ ಮತ್ತು ಕಟ್ಟಡಗಳ ನಿರ್ಮಾಣದಲ್ಲಿ ಬಳಸ ಬಹುದಾಗಿದೆ.ಕ್ವಾಲಿಟಿ ಉತ್ತಮವಾಗಿದ್ದು ಗ್ರಾಹಕರಿಗೆ ಒಳ್ಳೆಯ ರೀತಿ ಅನುಭವನ್ನು ಕೊಡುತ್ತದೆ ಎಂದು ಹೇಳಿದರು.ಮರಳು ಮತ್ತು ನೀರಿನ ಬಳಕೆಯನ್ನು ತಗ್ಗಿಸ ಬಹುದಾದ ಕರಾವಳಿ ಮತ್ತು ಮಲೆನಾಡು ಪ್ರದೇಶಕ್ಕೆ ಒಗ್ಗಿಕೊಳ್ಳುವಂತಹ ವಿನೂತನ ಮಾದರಿಯ ಸಾರ್ವಿನ್ ಪ್ಲಾಸ್ಟ್ ಕಟ್ಟಡ ನಿರ್ಮಾಣದ ಕೆಲಸಕ್ಕೆ ಯೋಗ್ಯವಾದ ಮೂಲ ವಸ್ತುವಾಗಿದೆ ಎಂದರು.

ಆರ್ಯ ಬಿಲ್ಡ್ ಕೇರ್ ಮಾಲೀಕರಾದ ಜೋಶಿ ತೋಮಸ ಮಾತನಾಡಿ,ಸಾರ್ವಿನ್ ಪ್ಲಾಸ್ಟ್ ಮರಳಿನ ಸಮಸ್ಯೆ ಹಾಗೂ ಕಾರ್ಮಿಕರ ಸಮಸ್ಯೆಗೆ ಪರಿಹಾರದ ಮಾರ್ಗವಾಗಿದ್ದು,ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಕೆಲಸವನ್ನು ಮಾಡಿಕೊಳ್ಳಬಹುದಾಗಿದೆ ಎಂದರು.
ಆರ್ಯ ಎಂರ್ಟಪ್ರ್ರೈಸಸ್ ನಾವುಂದ ಮಾಲೀಕರಾದ ನಾಗೇಂದ್ರ ದೇವಾಡಿಗ ಅವರು ಮಾತನಾಡಿ,ನಮ್ಮ ನೂತನ ಸಂಸ್ಥೆಯನ್ನು ಹಿರಿಯ ಆಶೀರ್ವಾದದಿಂದ ಹೆಮ್ಮಾಡಿಯಲ್ಲಿ ಆರಂಭಿಸಲಾಗಿದೆ.ನಮ್ಮ ಸಂಸ್ಥೆಗೆ ಎಲ್ಲರೂ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.ಇದೊಂದು ವಿನೂತನ ಮಾದರಿಯ ಜಿಪ್ಸಮ್ ಆಗಿದ್ದು ಮರಳಿನ ಬಳಕೆ ಇಲ್ಲದೆ ಕಟ್ಟಡ,ಮನೆ ನಿರ್ಮಾಣದ ಕೆಲಸಕ್ಕೆ ಬಳಸಿಕೊಳ್ಳಬಹುದು ಎಂದು ಹೇಳಿದರು.ಕರಾವಳಿ ತೀರ ಪ್ರದೇಶ ಸೇರಿದಂತೆ ಮಲೆನಾಡು ಭಾಗದ ವಾತಾವರಣಕ್ಕೂ ಸಾರ್ವಿನ್ ಪ್ಲಾಸ್ಟ್ ಒಗ್ಗಿಕೊಳ್ಳುತ್ತದೆ ಗ್ಯಾರಂಟಿ ನೀಡುವುದರ ಜತೆಗೆ ಮನೆ ಬಾಗಿಲಿಗೆ ಪ್ರಾಡೆಕ್ಟ್ ಸಫ್ಲೇ ಕೂಡ ಮಾಡಲಾಗುತ್ತದೆ ಎಂದರು.

ಎಮಿಯೆಂಟೆಕ್ ಪ್ರೈವೇಟ್ ಲಿಮಿಟೆಡ್ ನಿರ್ದೇಸಕ ನಿತಿನ್ ಅವರು ಮಾತನಾಡಿ,ಮರಳು,ವಾಟರ್ ಕ್ವಿರಿಂಗ್ ಇಲ್ಲದೆ ಸಾರ್ವಿನ್ ಪ್ಲಾಸ್ಟ್‍ಅನ್ನು ಕಟ್ಟಡ ನಿರ್ಮಾಣದ ಕೆಲಸದಲ್ಲಿ ಬಳಸಿಕೊಳ್ಳಬಹುದಾಗಿದೆ.ಸಾರ್ವಿನ್ ಪ್ಲಾಸ್ಟ್ ಬಳಕೆಯಿಂದ ಹಣ ಮತ್ತು ಸಮಯದ ಉಳಿತಾಯ ಕೂಡ ಆಗಲಿದೆ ಎಂದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಎಸ್ ಪೂಜಾರಿ ಹಾಗೂ ಜಗದೀಶ್ ಪೂಜಾರಿ ಅವರು ಸಂಸ್ಥೆಗೆ ಭೇಟಿ ನೀಡಿ ನವ ಉದ್ಯಮಕ್ಕೆ ಶುಭಹಾರೈಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಮಾಲೀಕರು,ಸಿಬ್ಬಂದಿಗಳು,ಅತಿಥಿಗಳು ಉಪಸ್ಥಿತರಿದ್ದರು.ಪ್ರಕಾಶ ದೇವಾಡಿಗ ಸ್ವಾಗತಿಸಿದರು.ಸಂಸ್ಥೆಯ ಸಹ ಮಾಲೀಕರಾದ ಲಂಬೋದರ ಶೆಟ್ಟಿ ವಂದಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago