ಕುಂದಾಪುರ:ತಾಲೂಕಿನ ಪ್ರಸಿದ್ಧ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ ಯಿಂದ ನಡೆಯಿತು.ಕಳೆದ 11 ವರ್ಷದಿಂದ ಅನ್ನದಾನ ಸೇವೆಯನ್ನು ನಡೆಸಿಕೊಂಡು ಬರುತ್ತಿರುವ ಶ್ರೀಮತಿ ನಾಗಲಕ್ಷ್ಮಿ ಸತೀಶ್ ಕೊಠಾರಿ ಕೃಷ್ಣಿಮನೆ ನಾಯ್ಕನಕಟ್ಟೆ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ಅನ್ನದಾನ ಸೇವೆಯನ್ನು ಸಮರ್ಪಿಸಿದರು.ಸಾವಿರಾರು ಮಂದಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಅನ್ನ ದಾನಿಗಳಾದ ಉದ್ಯಮಿ ಸತೀಶ್ ಕೊಠಾರಿ ಅವರು ಮಾತನಾಡಿ,ವೈವಾಹಿಕ ಜೀವನದಲ್ಲಿ ಸಂತಾನ ಭಾಗ್ಯ ಇಲ್ಲದ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ಬೇಡಿಕೊಂಡು ಹೋದಾಗ ಅಲ್ಪ ಕಾಲದಲ್ಲಿಯೇ ನನಗೆ ಸಿಹಿ ಸುದ್ದಿ ಸಿಕ್ಕಿದೆ, ಎರಡು ಮಕ್ಕಳ ತಂದೆ ಆಗಿ ಸುಖಿ ಸಂಸಾರವನ್ನು ಸಾಗಿಸುತ್ತಿದ್ದೇನೆ.ಕಷ್ಟವೆಂದು ಬೇಡಿದವರನ್ನು ಬ್ರಹ್ಮಲಿಂಗ ಎಂದಿಗೂ ಕೈ ಬಿಡುವುದಿಲ್ಲ ಎಂದು ಹೇಳಿದರು.ದೇವರು ಕೊಟ್ಟಿರುವುದು ದೇವರಿಗೆ ಸಮರ್ಪಿಸುತ್ತಿದ್ದೇನೆ ಇದರಲ್ಲಿ ನನ್ನದು ಎನ್ನುವುದು ಏನು ಇಲ್ಲ ಎಂದರು.ಅನ್ನದಾನ ಸೇವೆ ಮಾಡಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸತೀಶ್ ಕೊಠಾರಿ ಅವರ ಕುಟುಂಬಸ್ಥರು,
ದೇವಸ್ಥಾನದ ಆಡಳಿತ ಮಂಡಳಿಯವರು,
ಅಡುಗೆ ಅವರು,ಭಕ್ತಾದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.ಉದ್ಯಮಿ ಸತೀಶ್ ಕೊಠಾರಿ ಅವರು ಸಾಮಾಜಿಕ ಶೈಕ್ಷಣಿಕ ಕಾರ್ಯಗಳಲ್ಲಿ ತೊಡಗಿ ಕೊಳ್ಳುವುದರ ಜೊತೆಗೆ ಧಾರ್ಮಿಕ ಕ್ಷೇತ್ರದಲ್ಲೂ ತೊಡಗಿ ಕೊಂಡು ವಿಶೇಷವಾದ ಕೆಲಸವನ್ನು ಮಾಡುತ್ತಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…