ಕುಂದಾಪುರ

ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ

Share

ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದರು.ಕುಂದಾಪುರ, ಬೈಂದೂರು ಹಾಗೂ ಉಡುಪಿ ತಾಲೂಕುಗಳಿಂದ ಆಗಮಿಸಿದ 35 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ದೇವರ ಅನಾಯಾಸ ದರ್ಶನಕ್ಕೆ ಸಕಲ ಸೌಕರ್ಯ ಒದಗಿಸಲಾಗಿತ್ತು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾರಣಕಟ್ಟೆ ಶ್ರೀ ಕೃಷ್ಣ ಮೂರ್ತಿ ಮಂಜರು ಮಾತನಾಡಿ,ಅನಾದಿ ಕಾಲದಿಂದಲೂ ಮಕರ ಸಂಕ್ರಾಂತಿ ದಿನ ಅಭಿಜಿತ್ ಲಗ್ನ ಸಮೂಹರ್ತನಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಕ್ತಾದಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.
ಅವಿಭಜಿತ ದ.ಕ
ಜಿಲ್ಲೆಯ ಜನರು ಮಾತ್ರವಲ್ಲದೆ ಶ್ರಂಗೇರಿ ,ಕೊಪ್ಪಳ ಇನ್ನಿತರ ಭಾಗದಿಂದಲೂ ಜಾತ್ರೆಗೆ ಬರುತ್ತಾರೆ ಎಂದು ಹೇಳಿದರು.ಶ್ರೀ ಬ್ರಹ್ಮಲಿಂಗೇಶ್ವರ ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ನುಡಿದರು.
ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ
ಉದ್ಯಮಿ ಜಯರಾಮ ಶೆಟ್ಟಿ ಮಾತನಾಡಿ
,ಶ್ರೀ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಾಲಯದ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.ವರ್ಷಂಪ್ರತಿ ನಡೆಯುವ ಮಾರಣಕಟ್ಟೆ ಜಾತ್ರೆಗೆ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಸಲ್ಲಿಸುತ್ತಾರೆ.ಶ್ರೀ ದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago