ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದರು.ಕುಂದಾಪುರ, ಬೈಂದೂರು ಹಾಗೂ ಉಡುಪಿ ತಾಲೂಕುಗಳಿಂದ ಆಗಮಿಸಿದ 35 ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ದೇವರ ಅನಾಯಾಸ ದರ್ಶನಕ್ಕೆ ಸಕಲ ಸೌಕರ್ಯ ಒದಗಿಸಲಾಗಿತ್ತು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾರಣಕಟ್ಟೆ ಶ್ರೀ ಕೃಷ್ಣ ಮೂರ್ತಿ ಮಂಜರು ಮಾತನಾಡಿ,ಅನಾದಿ ಕಾಲದಿಂದಲೂ ಮಕರ ಸಂಕ್ರಾಂತಿ ದಿನ ಅಭಿಜಿತ್ ಲಗ್ನ ಸಮೂಹರ್ತನಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಕ್ತಾದಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.
ಅವಿಭಜಿತ ದ.ಕ
ಜಿಲ್ಲೆಯ ಜನರು ಮಾತ್ರವಲ್ಲದೆ ಶ್ರಂಗೇರಿ ,ಕೊಪ್ಪಳ ಇನ್ನಿತರ ಭಾಗದಿಂದಲೂ ಜಾತ್ರೆಗೆ ಬರುತ್ತಾರೆ ಎಂದು ಹೇಳಿದರು.ಶ್ರೀ ಬ್ರಹ್ಮಲಿಂಗೇಶ್ವರ ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ನುಡಿದರು.
ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ
ಉದ್ಯಮಿ ಜಯರಾಮ ಶೆಟ್ಟಿ ಮಾತನಾಡಿ,ಶ್ರೀ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಾಲಯದ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.ವರ್ಷಂಪ್ರತಿ ನಡೆಯುವ ಮಾರಣಕಟ್ಟೆ ಜಾತ್ರೆಗೆ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಕಷ್ಟ ಕಾಲದಲ್ಲಿ ಹೇಳಿಕೊಂಡ ಹರಕೆಯನ್ನು ಸಲ್ಲಿಸುತ್ತಾರೆ.ಶ್ರೀ ದೇವರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಶುಭ ಹಾರೈಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…