ಕುಂದಾಪುರ:ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹೊಸಾಡು ಗ್ರಾಮದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.
ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಮಕ್ಕಿ ಕ್ರಾಸ್ ನಿಂದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿ.ಮೀ ವರೆಗಿನ ಮಣ್ಣಿನ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ 6 ವರ್ಷಗಳಿಂದ ಕಾಲೋನಿ ನಿವಾಸಿಗಳು ನೀಡಿರುವ ಹಲವು ಮನವಿಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದನೆ ಮಾಡದೆ ಇದ್ದಿದ್ದರಿಂದ ಬೇಸತ್ತ ನಾಗರಿಕರು ಮುಂಬರುವ ಲೋಕಸಭೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿ ತಮ್ಮ ಅಸಹನೆಯನ್ನು ಹೊರಗೆ ಹಾಕಿದ್ದಾರೆ.ರಸ್ತೆ ಅಭಿವೃದ್ದಿಗೊಳಿಸದೆ ಹೋದರೆ ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಹೊಸಾಡು ಗ್ರಾ.ಪಂ ಮಾಜಿ ಸದಸ್ಯ ಸೀತಾರಾಮ ಶೆಟ್ಟಿ,ರಾಮಣ್ಣ,ಅವಿನಾಶ್,ಲಚ್ಚು,ಸುಶೀಲ,ಮಾಲತಿ,ನರಸಿಂಹ,ವಿವೇಕ,ರಸಿಕ,ಅಭಿಷೇಕ,ಸುಭಾಷ್,ನೇತ್ರಾ,
ದಿನೇಶ,ಗುಲಾಬಿ,ರಾಮು ಉಪಸ್ಥಿತರಿದ್ದರು.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…