ಕುಂದಾಪುರ:ಅವನತಿಯಲ್ಲಿರುವ ಸರಕಾರಿ ಶಾಲೆಗಳನ್ನು ಉದ್ಯಮಿಗಳು,ದಾನಿಗಳು,ಸಂಘ ಸಂಸ್ಥೆಗಳು ದತ್ತು ಸ್ವೀಕಾರ ಮಾಡುವುದರ ಮುಖೇನ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಬಡಾಕೆರೆ ಶಾಲೆಯಲ್ಲಿ ಬುಧವಾರ ನಡೆದ ಶಾಲೆ ದತ್ತು ಸ್ವೀಕಾರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳನ್ನು ಉಳಿಸಬೇಕು ಎನ್ನುವ ನೆಲೆಯಲ್ಲಿ 300 ಟ್ರಿಸ್ ಎನ್ನುವ ವಿನೂತನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಇವೊಂದು ಪುಣ್ಯದ ಕೆಲಸದಲ್ಲಿ ಭಾಗಿದಾರರಾಗುವ ಮುಖೇನ ಮುಖೇನ ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಕೈ ಜೋಡಿಸಬೇಕು ಎಂದು ವಿನಂತಿಸಿಕೊಂಡರು.
ಪ್ರಾಂತೀಯ ಧರ್ಮಾದಿಕಾರಿಗಳು ಶ್ರೀಶಾರದ ಪೀಠಂ ಶೃಂಗೇರಿ ವೇ.ಮೂ ಲೋಕೇಶ್ ಅಡಿಗ ನಾಗ ಪಾತ್ರಿಗಳು ನಾವುಂದ ಬಡಾಕೆರೆ ಅವರು ಬಡಾಕೆರೆ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಮಾತನಾಡಿ,ಆಧುನಿಕ ಕಾಲ ಘಟ್ಟದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ವೈಭವೀಕರಣವನ್ನು ನೋಡಿದರೆ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಎನ್ನುವುದು ಮರಿಚಿಕೆ ಆಗಿದೆ ಎನ್ನುವ ಭಾವ ಮೂಡುತ್ತಿದೆ.ಪ್ರತಿಯೊಂದು ಮಗುವಿಗೂ ವಿದ್ಯೆ ಎನ್ನುವುದು ಬಹು ಮುಖ್ಯವಾದ ಅಂಶವಾಗಿದ್ದು ಇವೊಂದು ನೆಲೆಯಲ್ಲಿ ನಮ್ಮೂರಿನ ಮಕ್ಕಳಿಗೆ ಒಳ್ಳೆ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಿಂದ ಶಾಲೆಯನ್ನು ದತ್ತು ಸ್ವೀಕಾರ ಮಾಡಲು ನಿರ್ಧರಿಸಲಾಗಿದೆ.ಶಾಲೆಯ ಸರ್ವತೊಮುಖ ಅಭಿವೃದ್ಧಿಗೆ ಊರಿನವರು ಸಹಕರಿಸಬೇಕೆಂದು ವಿನಂತಿಸಿಕೊಂಡರು.
ಊರಿನ ಜನರಲ್ಲಿ ಬಂಧುತ್ವ ಬೆಳೆದಾಗ ಮಾತ್ರ ಬಾಂಧವ್ಯ ಮೂಡಲು ಸಾಧ್ಯ ಪ್ರೀತಿಯಿಂದ ದಾನ ಮಾಡಿದರೆ ಗುರುತ್ವ ಗೌರವ ಸಿಗುತ್ತದೆ ಎಂದು ನುಡಿದರು.
ನಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು,ಹಿರಿಯರಾದ ಮಾದವ ಅಡಿಗ,ವಾಸು ಪೂಜಾರಿ,ನಾಡ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ ಶೆಟ್ಟಿ,ಅಶೋಕ ಶೆಟ್ಟಿ ಸಂಸಾಡಿ,ಪ್ರವೀಣ್ ಶೆಟ್ಟಿ ಕಡಿಕೆ ಮತ್ತು ಗ್ರಾಮಸ್ಥರು,ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.ಪಂಚಾಯಿತಿ ಸದಸ್ಯ ಶ್ರೀಧರ ದೇವಾಡಿಗ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಮುಖ್ಯೋಪಾಧ್ಯಾಯಿನಿ ರೋಹಿಣಿ ವಂದಿಸಿದರು.
ಶಾಲೆಯಲ್ಲಿ ಕೈಗೊಳ್ಳಬೇಕಾದ ಉದ್ದೇಶಿತ ಯೋಜನೆಗಳು
ಬೆಂಚುಗಳ ನವೀಕರಣ
ಬಾಲಭವನ ನಿರ್ಮಾಣ
ಎಲ್.ಕೆ.ಜಿ,ಯು.ಕೆ.ಜಿ ಆರಂಭ
ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ ಪ್ರವಚನ
ಇಂಗ್ಲಿಷ್ ಸ್ಪಿಕಿಂಗ್ ಕೋರ್ಸ್
ಆಟಿಕೆಗಳ ಕೊಡುಗೆ,ಗೇಟ್ ವ್ಯವಸ್ಥೆ
ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ
ಶಾಲೆಗೆ ಬಣ್ಣದ ವ್ಯವಸ್ಥೆ,ಶಾಲಾ ಕಂಪೌಂಡ್ ನವೀಕರಣ,ಹೆಚ್ಚುವರಿಯಾಗಿ ಶಿಕ್ಷಕರ ನಿಯೋಜನೆ
ಶಾಶ್ವತ ವಿದ್ಯಾನಿಧಿ ಯೋಜನೆ ಜಾರಿ,ಹಸಿರು ತೋಟ,ಗ್ರಂಥಾಲಯ
ಕಂಪ್ಯೂಟರ್ ತರಗತಿ ಆರಂಭ
ಶಾಲೆ ಮೈದಾನಕ್ಕೆ ಇಂಟರ್ ಲಾಕ್ ಅಳವಡಿಕೆ
ಸಮವಸ್ತ್ರ,ಪಠ್ಯ ಪುಸ್ತಕ ವಿತರಣೆ
ಇನ್ನಿತರ ಯೋಜನೆಗಳು
ವರದಿ-ಜಗದೀಶ ದೇವಾಡಿಗ ಮುಳ್ಳಿಕಟ್ಟೆ
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…