ಕುಂದಾಪುರ:ಉತ್ತಮವಾದ ಶಿಕ್ಷಕರ ಪಡೆಯನ್ನು ಹೊಂದಿದ್ದರು ಆಧುನಿಕತೆಯ ಬದಲಾವಣೆಯಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಕಷ್ಟಕರವಾದ ಪರಿಸ್ಥಿತಿ ಎನ್ನುವಂತೆ ಭಾಸವಾಗುತ್ತಿದೆ.ಮಕ್ಕಳಿಗೆ ಒಳ್ಳೆ ರೀತಿಯ ಶಿಕ್ಷಣವನ್ನು ನೀಡುವಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಎಲ್ಲಾ ಸರಕಾರಗಳು ಉತ್ತಮವಾದ ಹೆಜ್ಜೆಯನ್ನು ಇಟ್ಟಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಮತ್ತು ಚಿಣ್ಣರ ಕಲರವ-2024 ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.
3 ರಿಂದ 11 ವರ್ಷದ ಒಳಗಿನ ಮಕ್ಕಳಿಗೆ ಯಾವ ರೀತಿ ಶಿಕ್ಷಣ ನೀಡಬಹುದು ಎನ್ನುವುದರ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ.ಕಡಿಕೆ ಶಾಲೆಯಲ್ಲಿನ ಮೂಲ ಸೌಕರ್ಯದ ವ್ಯವಸ್ಥೆಯನ್ನು ಗಮನಿಸಿದಾಗ ಬೈಂದೂರು ಕ್ಷೇತ್ರದಲ್ಲಿ ಇದೊಂದು ಮಾದರಿ ಶಾಲೆ ಆಗಿ ಗುರುತಿಸಿಕೊಂಡಿದೆ ಎಂದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ನಾಗೇಶ ಭಟ್ ಅಧ್ಯಕ್ಷತೆ ವಹಿಸಿದ್ದರು.ಶ್ರೀರಾಮ ಫಾರ್ಮ್ ಕೋಣ್ಕಿ ಕಾಡ್ರಿಹಾಡಿ ಸುಧಾಕರ ಶೆಟ್ಟಿ ಧ್ವಜಕಟ್ಟೆ ಉದ್ಘಾಟಿಸಿದರು.ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮೊಗವೀರ ದೀಪ ಬೆಳಗಿಸಿದರು.ಕಡಿಕೆ ಪ್ರವೀಣ್ ಕುಮಾರ್ ಶೆಟ್ಟಿ,ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಗಿರಿಜ,ಪಂಚಾಯತ್ ಸದಸ್ಯೆ ಪದ್ದು ಪೂಜಾರಿ,ಹಾಲು ಉತ್ಪಾದಕರ ಸಹಕಾರಿ ಸಂಘ ಕೋಣ್ಕಿ ಅಧ್ಯಕ್ಷ ರಾಜೀವ ಶೆಟ್ಟಿ,ಚಂದ್ರಶೇಖರ ಶೆಟ್ಟಿ ಕಡಿಕೆ,ಮಾಜಿ ತಾ.ಪಂ ಅಧ್ಯಕ್ಷರಾದ ಮಹೇಂದ್ರ ಪೂಜಾರಿ ಮತ್ತು ಶಂಕರ ಶೆಟ್ಟಿ,ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ,ಉದ್ಯಮಿ ಗೋಪಾಲ ಶೆಟ್ಟಿ ಜಡ್ಡಾಡಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ.ಜಿ ಮೊಗವೀರ,ಯೋಗಿರಾಜ್ ನಾರಾಯಣ ವಿಠ್ಠಲ,ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸಂತೋಷ ಹೆಬ್ಬಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಶ್ರೀಮತಿ ಮತ್ತು ಪ್ರಸಾದ ಶೆಟ್ಟಿ ಮತ್ತು ಮಕ್ಕಳು ಆಮನೆ ಕಡಿಕೆ ಶಾಲೆಗೆ ನೂತನ ಧ್ವಜಕಟ್ಟೆಯನ್ನು ಕೊಡುಗೆ ಆಗಿ ನೀಡಿದ್ದರು.
ಬೆಳಕು ಚಾರಿಟೇಬಲ್ ಟ್ರಸ್ಟ್ ರಾಘವೇಂದ್ರ ಶೆಟ್ಟಿ ಶಾಲೆಗೆ ಎರಡು ಕಂಪ್ಯೂಟರ್ ಅನ್ನು ಕೊಡುಗೆ ಆಗಿ ನೀಡಿದರು.
ಶಿಕ್ಷಕಿ ಪೂಜಾ ಸ್ವಾಗತಿಸಿದರು.ಶಿಕ್ಷಕ ಸಂದೀಪ ದೇವಾಡಿಗ ನಿರೂಪಿಸಿದರು.ಶಿಕ್ಷಕಿಯರಾದ ಶಿಲ್ಪಾ ಶ್ರೀ ಅಡಿಗ ಬಹುಮಾನ ಪಟ್ಟಿ ವಾಚಿಸಿದರು.ಸುಪ್ರಿತಾ ಶೆಟ್ಟಿ ವಂದಿಸಿದರು.ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…