ಕುಂದಾಪುರ:ಉತ್ತಮವಾದ ಶಿಕ್ಷಕರ ಪಡೆಯನ್ನು ಹೊಂದಿದ್ದರು ಆಧುನಿಕತೆಯ ಬದಲಾವಣೆಯಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ಕಷ್ಟಕರವಾದ ಪರಿಸ್ಥಿತಿ ಎನ್ನುವಂತೆ ಭಾಸವಾಗುತ್ತಿದೆ.ಮಕ್ಕಳಿಗೆ ಒಳ್ಳೆ ರೀತಿಯ ಶಿಕ್ಷಣವನ್ನು ನೀಡುವಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಎಲ್ಲಾ ಸರಕಾರಗಳು ಉತ್ತಮವಾದ ಹೆಜ್ಜೆಯನ್ನು ಇಟ್ಟಿವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಡಿಕೆ-ನಾಡ ಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವ ಮತ್ತು ಚಿಣ್ಣರ ಕಲರವ-2024 ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.
3 ರಿಂದ 11 ವರ್ಷದ ಒಳಗಿನ ಮಕ್ಕಳಿಗೆ ಯಾವ ರೀತಿ ಶಿಕ್ಷಣ ನೀಡಬಹುದು ಎನ್ನುವುದರ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ.ಕಡಿಕೆ ಶಾಲೆಯಲ್ಲಿನ ಮೂಲ ಸೌಕರ್ಯದ ವ್ಯವಸ್ಥೆಯನ್ನು ಗಮನಿಸಿದಾಗ ಬೈಂದೂರು ಕ್ಷೇತ್ರದಲ್ಲಿ ಇದೊಂದು ಮಾದರಿ ಶಾಲೆ ಆಗಿ ಗುರುತಿಸಿಕೊಂಡಿದೆ ಎಂದರು.
ಶಾಲಾ ಎಸ್ಡಿಎಂಸಿ ಅಧ್ಯಕ್ಷ ನಾಗೇಶ ಭಟ್ ಅಧ್ಯಕ್ಷತೆ ವಹಿಸಿದ್ದರು.ಶ್ರೀರಾಮ ಫಾರ್ಮ್ ಕೋಣ್ಕಿ ಕಾಡ್ರಿಹಾಡಿ ಸುಧಾಕರ ಶೆಟ್ಟಿ ಧ್ವಜಕಟ್ಟೆ ಉದ್ಘಾಟಿಸಿದರು.ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮೊಗವೀರ ದೀಪ ಬೆಳಗಿಸಿದರು.ಕಡಿಕೆ ಪ್ರವೀಣ್ ಕುಮಾರ್ ಶೆಟ್ಟಿ,ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಗಿರಿಜ,ಪಂಚಾಯತ್ ಸದಸ್ಯೆ ಪದ್ದು ಪೂಜಾರಿ,ಹಾಲು ಉತ್ಪಾದಕರ ಸಹಕಾರಿ ಸಂಘ ಕೋಣ್ಕಿ ಅಧ್ಯಕ್ಷ ರಾಜೀವ ಶೆಟ್ಟಿ,ಚಂದ್ರಶೇಖರ ಶೆಟ್ಟಿ ಕಡಿಕೆ,ಮಾಜಿ ತಾ.ಪಂ ಅಧ್ಯಕ್ಷರಾದ ಮಹೇಂದ್ರ ಪೂಜಾರಿ ಮತ್ತು ಶಂಕರ ಶೆಟ್ಟಿ,ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ,ಉದ್ಯಮಿ ಗೋಪಾಲ ಶೆಟ್ಟಿ ಜಡ್ಡಾಡಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ.ಜಿ ಮೊಗವೀರ,ಯೋಗಿರಾಜ್ ನಾರಾಯಣ ವಿಠ್ಠಲ,ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸಂತೋಷ ಹೆಬ್ಬಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಶ್ರೀಮತಿ ಮತ್ತು ಪ್ರಸಾದ ಶೆಟ್ಟಿ ಮತ್ತು ಮಕ್ಕಳು ಆಮನೆ ಕಡಿಕೆ ಶಾಲೆಗೆ ನೂತನ ಧ್ವಜಕಟ್ಟೆಯನ್ನು ಕೊಡುಗೆ ಆಗಿ ನೀಡಿದ್ದರು.
ಬೆಳಕು ಚಾರಿಟೇಬಲ್ ಟ್ರಸ್ಟ್ ರಾಘವೇಂದ್ರ ಶೆಟ್ಟಿ ಶಾಲೆಗೆ ಎರಡು ಕಂಪ್ಯೂಟರ್ ಅನ್ನು ಕೊಡುಗೆ ಆಗಿ ನೀಡಿದರು.
ಶಿಕ್ಷಕಿ ಪೂಜಾ ಸ್ವಾಗತಿಸಿದರು.ಶಿಕ್ಷಕ ಸಂದೀಪ ದೇವಾಡಿಗ ನಿರೂಪಿಸಿದರು.ಶಿಕ್ಷಕಿಯರಾದ ಶಿಲ್ಪಾ ಶ್ರೀ ಅಡಿಗ ಬಹುಮಾನ ಪಟ್ಟಿ ವಾಚಿಸಿದರು.ಸುಪ್ರಿತಾ ಶೆಟ್ಟಿ ವಂದಿಸಿದರು.ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…