ಕೇಂದ್ರ ಸಮಿತಿ ಒಕ್ಕೂಟ ಪದಗ್ರಹಣ,ಅನುದಾನಗಳ ವಿತರಣಾ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ಕಷ್ಟದಲ್ಲಿರುವ ಜನರನ್ನು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮೇಲೆತ್ತುವ ಉದ್ದೇಶದಿಂದ ಆರಂಭಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿರುವುದರ ಜತೆಗೆ ಕೇರಳ ರಾಜ್ಯದ ಕಾಸರಗೋಡುನಲ್ಲಿಯೂ ಜನ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ ಹೇಳಿದರು.

Advertisement

ಬೈಂದೂರು ತಾಲೂಕಿನ ನಾಗೂರು ಶ್ರೀಗೋಪಾಲಕೃಷ್ಣ ಸಭಾ ಭವನದಲ್ಲಿ ಶನಿವಾರ ನಡೆದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಘದ ಸದಸ್ಯರಿಗೆ ಸಹಾಯ ಸಹಕಾರ ಮಾಡುವುದರ ಮೂಲಕ ಜನರಿಗೆ ಬೇಕಾಗಿರುವಂತಹ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ.ಕಾರ್ಯ ಚಟುವಟಿಕೆಯ ಯಶಸ್ಸಿನ ಹಾದಿಯನ್ನು ಗಮನಿಸಿದಾಗ ಸಂಸ್ಥೆಯ ಉದ್ದೇಶ ಸಫಲತೆ ಕಂಡಿದೆ ಎಂದು ಅಭಿಪ್ರಾಯಪಟ್ಟರು.

ಕರಾವಳಿ ಪ್ರಾದೇಶಿಕ ವಿಭಾಗ ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ಮಾತನಾಡಿ,ಆರ್ಥಿಕ ಶಕ್ತಿಯನ್ನು ನೀಡುವುದರ ಜತೆಗೆ ಸಮಾಜದ ಜನರಿಗೆ ನ್ಯಾಯವನ್ನು ದೊರಕಿಸಿ ಕೊಡುವಂತಹ ಕೆಲಸವನ್ನು ಯೋಜನೆಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದರು.

ಕೇಂದ್ರ ಸಮಿತಿ ಪ್ರ.ಬ.ಸ್ವ.ಸ.ಸ ಒಕ್ಕೂಟ ಬೈಂದೂರು ತಾಲೂಕು ಅಧ್ಯಕ್ಷ ರಘುರಾಮ.ಕೆ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ತಾಲೂಕು ಜನಜಾಗೃತಿ ವೇದಿಕೆ ಬೈಂದೂರು ತಾಲೂಕ ಅಧ್ಯಕ್ಷ ಸುಧಾಕರ ಆಚಾರ್ಯ,ಕೇಂದ್ರ ಸಮಿತಿ ಒಕ್ಕೂಟ ಬೈಂದೂರು ತಾಲೂಕು ನೂತನ ಅಧ್ಯಕ್ಷ ವಾಸು ಮೇಸ್ತ,ಭಜನಾ ಪರಿಷತ್ ಅಧ್ಯಕ್ಷ ಕೃಷ್ಣ ಪೂಜಾರಿ,ಶ್ರೀಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ಅಧ್ಯಕ್ಷ ಚಂದ್ರ ಪೂಜಾರಿ,ಶೌರ್ಯ ವಿಪತ್ತು ನಿರ್ವಹಣಾ ಘಟಕ ಬೈಂದೂರು ಕ್ಯಾಪ್ಟನ್ ಪ್ರವೀಣ ಮೊವಾಡಿ,ಮಂಜುನಾಥ ಉಡುಪ ನಾಗೂರು,ಶಿವರಾಜ ಪೂಜಾರಿ,ರಾಮ ಮೇಸ್ತ,ಕೃಷ್ಣ ಪೂಜಾರಿ,ನಾರಾಯಣ ಕೆ ಗುಜ್ಜಾಡಿ ಹಾಗೂ ನಾನಾ ವಲಯಗಳ ನಿಕಟ ಪೂರ್ವ ಮತ್ತು ನೂತನ ಅಧ್ಯಕ್ಷರುಗಳು ಉಪಸ್ಥಿತರಿದ್ದರು.ಯೋಜನಾಧಿಕಾರಿ ವಿನಾಯಕ ಪೈ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.ಗೋಳಿಹೊಳೆ ಮೇಲ್ವಿಚಾರಕಿ ಸಂಗೀತಾ ನಿರೂಪಿಸಿದರು.ಕಿರಿಮಂಜೇಶ್ವರ ಮೇಲ್ವಿಚಾರಕ ರಾಘವೇಂದ್ರ ವಂದಿಸಿದರು.

ಏಳು ವಲಯಗಳ ನೂತನ ಅಧ್ಯಕ್ಷರಿಗೆ ಪದ ಪ್ರದಾನ ಮಾಡಲಾಯಿತು.ವಿಶೇಷ ಸಾಧನೆಗೈದ ಒಕ್ಕೂಟಗಳಿಗೆ ಅಭಿನಂದನೆ ಪತ್ರ ವಿತರಿಸಲಾಯಿತು.ನಾನಾ ಫಲಾನುಭವಿಗಳಿಗೆ ಅನುದಾನದ ಆದೇಶ ಪತ್ರ ನೀಡಲಾಯಿತು.ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.


ನೂತನ ವಲಯಾಧ್ಯಕ್ಷರಿಗೆ ಅಧಿಕಾರ ಹಸ್ತಾರ
ಉಪ್ಪುಂದ ವಲಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರಶೇಖರ,ಕಿರಿಮಂಜೇಶ್ವರ ವಲಯಾಧ್ಯಕ್ಷರಾಗಿ ಸುರೇಂದ್ರ ನಾಯ್ಕ್,ಗೋಳಿಹೊಳೆ ವಲಯಾಧ್ಯಕ್ಷರಾಗಿ ನಾರಾಯಣ ಗೌಡ,ತ್ರಾಸಿ ವಲಯಾಧ್ಯಕ್ಷರಾಗಿ ಪ್ರಮೀಳ,ಪಡುಕೋಣೆ ವಲಯಾಧ್ಯಕ್ಷರಾಗಿ ಚಂದ್ರ ಪೂಜಾರಿ ಹಾಗೂ ಕೊಲ್ಲೂರು ವಲಯಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

7 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago