ಕುಂದಾಪುರ:ಏಳೆಯ ವಯಸ್ಸಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುಲು ಮಕ್ಕಳ ಗ್ರಾಮಸಭೆ ಅಂತಹ ವೇದಿಕೆ ವಿದ್ಯಾರ್ಥಿಗಳಿಗೆ ಉತ್ತಮವಾದ ಅವಕಾಶವನ್ನು ಒದಗಿಸಿ ಕೊಡುತ್ತದೆ.ಗ್ರಾಮ ಸಭೆಯಲ್ಲಿ ಮಂಡಿಸಿದಂತಹ ಮಕ್ಕಳ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಹೊಳ್ಮಗೆ ಸುಭಾಶ್ ಶೆಟ್ಟಿ ಹೇಳಿದರು.
ಹಕ್ಲಾಡಿ ಗ್ರಾಮ ಪಂಚಾಯತ್ ವತಿಯಿಂದ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ಸೋಮವಾರ ನಡೆದ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆ ಮತ್ತು ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಮಕ್ಕಳ ಮಿತ್ರ ಚಂದ್ರಹಾಸ ಹೊಳ್ಮಗೆ,ಹಕ್ಲಾಡಿ ಶಾಲೆ ಮುಖ್ಯೋಪಾಧ್ಯಾಯ ಮಂಜುನಾಥ,ನಮ್ಮ ಭೂಮಿ ಮೇಲ್ವಿಚಾರಕ ಶ್ರೀನಿವಾಸ ಗಾಣಿಗ,ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸಿಂಧು,ಗ್ರಾಮಕರಣಿಕ ವಿಘ್ನೇಶ,ದೈಹಿಕ ಶಿಕ್ಷಕ ಚಂದ್ರಶೇಖರ ಶೆಟ್ಟಿ,ಆಶಾ ಮತ್ತು ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿಗಳು,ಲೆಕ್ಕ ಸಹಾಯಕರು,ಹಕ್ಲಾಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರುಉಪಸ್ಥಿತರಿದ್ದರು.ಪಿಡಿಒ ಸತೀಶ್ ವಡ್ಡರ್ಸೆ ಸ್ವಾಗತಿಸಿದರು.ಶ್ರೇಯಾ ನಿರೂಪಿಸಿದರು.ಪಂಚಾಯತ್ ಸಿಬ್ಬಂದಿ ಶೇಖರ್ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…