ಕುಂದಾಪುರ:ಏಳೆಯ ವಯಸ್ಸಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುಲು ಮಕ್ಕಳ ಗ್ರಾಮಸಭೆ ಅಂತಹ ವೇದಿಕೆ ವಿದ್ಯಾರ್ಥಿಗಳಿಗೆ ಉತ್ತಮವಾದ ಅವಕಾಶವನ್ನು ಒದಗಿಸಿ ಕೊಡುತ್ತದೆ.ಗ್ರಾಮ ಸಭೆಯಲ್ಲಿ ಮಂಡಿಸಿದಂತಹ ಮಕ್ಕಳ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಹೊಳ್ಮಗೆ ಸುಭಾಶ್ ಶೆಟ್ಟಿ ಹೇಳಿದರು.
ಹಕ್ಲಾಡಿ ಗ್ರಾಮ ಪಂಚಾಯತ್ ವತಿಯಿಂದ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ಸೋಮವಾರ ನಡೆದ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆ ಮತ್ತು ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಮಕ್ಕಳ ಮಿತ್ರ ಚಂದ್ರಹಾಸ ಹೊಳ್ಮಗೆ,ಹಕ್ಲಾಡಿ ಶಾಲೆ ಮುಖ್ಯೋಪಾಧ್ಯಾಯ ಮಂಜುನಾಥ,ನಮ್ಮ ಭೂಮಿ ಮೇಲ್ವಿಚಾರಕ ಶ್ರೀನಿವಾಸ ಗಾಣಿಗ,ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸಿಂಧು,ಗ್ರಾಮಕರಣಿಕ ವಿಘ್ನೇಶ,ದೈಹಿಕ ಶಿಕ್ಷಕ ಚಂದ್ರಶೇಖರ ಶೆಟ್ಟಿ,ಆಶಾ ಮತ್ತು ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು,ಪಂಚಾಯತ್ ಸಿಬ್ಬಂದಿಗಳು,ಲೆಕ್ಕ ಸಹಾಯಕರು,ಹಕ್ಲಾಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರುಉಪಸ್ಥಿತರಿದ್ದರು.ಪಿಡಿಒ ಸತೀಶ್ ವಡ್ಡರ್ಸೆ ಸ್ವಾಗತಿಸಿದರು.ಶ್ರೇಯಾ ನಿರೂಪಿಸಿದರು.ಪಂಚಾಯತ್ ಸಿಬ್ಬಂದಿ ಶೇಖರ್ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…