ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕೇರಿಕೊಡ್ಲು ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡುವುದರ ಮುಖೇನ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರ
ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮದ ಕೇರಿಕೊಡ್ಲು ಭಾಗದ ನಿವಾಸಿಗಳಿಗೆ ಸುಸಜ್ಜಿತವಾದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಹೊಂದುವುದು ಕನಸಿನ ಮಾತೆ ಎಂದು ಭಾಸವಾಗುತ್ತಿದೆ.ಕಳೆದ ಮುವತ್ತು ವರ್ಷಗಳಿಂದ ಸ್ಥಳೀಯರು ಸಲ್ಲಿಕೆ ಮಾಡುತ್ತಿರುವ ಅಹವಾಲಿಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಒಂದು ಬಾರಿಯೂ ಸ್ಪಂದನೆ ಮಾಡಿಲ್ಲ.ಮಳೆಗಾಲದಲ್ಲಿ ಕೇಸರಿನ ರಾಡಿಯಿಂದ ಕೂಡಿರುವ ರಸ್ತೆಯಲ್ಲಿ ಸಾಗುವುದೆ ಅಲ್ಲಿನ ಜನರಿಗೆ ದುಸ್ತರವಾಗಿದೆ.ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕೇರಿಕೊಡ್ಲು ರಸ್ತೆಯನ್ನು ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಅಭಿವೃದ್ಧಿ ಪಡಿಸಲು ಜನಪ್ರತಿನಿಧಿಗಳು,ಅಧಿಕಾರಿಗಳು ಮುಂದಾಗದೆ ಇದ್ದರೆ ಚುನಾವಣೆಯಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಕೆಂಪು ಧೂಳಿನಿಂದ ಕೂಡಿದ್ದರೆ/ಮಳೆಗಾಲದಲ್ಲಿ ಕೇಸರು ರಾಡಿಯಿಂದ ಕೂಡಿರುತ್ತದೆ.
ಚುನಾವಣೆ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ:ಕೇರಿಕೊಡ್ಲು ಪರಿಸರದಲ್ಲಿ 20ಕ್ಕೂ ಅಧಿಕ ಮನೆಗಳಿವೆ, ಅಂದಾಜು 120ಕ್ಕೂ ಅಧಿಕ ಮತಗಳಿವೆ.ಊರಿನ ಅಭಿವೃದ್ಧಿಯನ್ನು ಕಡೆಗಣಿಸಿದ್ದರಿಂದ ಬೇಸತ್ತ ಅಲ್ಲಿನ ನಾಗರಿಕರು ಚುನಾವಣೆಯನ್ನೆ ಬಹಿಷ್ಕರಿಸುವ ನಿರ್ಧಾರಕ್ಕೆ ಮುಂದಾಗಿದ್ದಾರೆ.ಅದರ ಭಾಗವಾಗಿ ಬ್ಯಾನರ್ ಅಳವಡಿಕೆಯನ್ನು ಕೂಡ ಮಾಡಿದ್ದಾರೆ.
ಮಣ್ಣಿನ ರಸ್ತೆಯಲ್ಲಿ ಸಂಕಟದ ಸಂಚಾರ:ಮೊವಾಡಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಕೇರಿಕೊಡ್ಲು ಭಾಗದ ಮಣ್ಣಿನ ರಸ್ತೆ ಸುಮಾರು 1.30 ಕಿ.ಮೀ ದೂರವನ್ನು ಹೊಂದಿದೆ ಆ ಭಾಗದ ನಿವಾಸಿಗಳಿಗೆ ಇದೆ ಪ್ರಮುಖ ರಸ್ತೆ ಆಗಿದ್ದು ಒಂದು ಬಾರಿಯೂ ಅಭಿವೃದ್ಧಿ ಆಗಿಲ್ಲ.ಮಣ್ಣಿನಿಂದ ಕೂಡಿದ ಕೇರಿಕೊಡ್ಲು ರಸ್ತೆ ಬೇಸಿಗೆಯಲ್ಲಿ ಕೆಂಪು ಧೂಳಿನಿಂದ ಕೂಡಿದ್ದರೆ,ಮಳೆಗಾಲದಲ್ಲಿ ಕೇಸರು ರಾಡಿಯಿಂದ ಕೂಡಿರುತ್ತದೆ.ಸಂಪೂರ್ಣವಾಗಿ ಹದಗೆಟ್ಟಿರುವ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕ್ಕೆನ್ನುವುದು ಗ್ರಾಮಸ್ಥರ ಆಗಹ್ರವಾಗಿದೆ.
ಹೊಸಾಡು ಗ್ರಾಮ ಒಂದರಲ್ಲೇ ಇದು ಎರಡನೇ ಪ್ರರಕರಣ:ಕಳೆದ ಒಂದು ವಾರದ ಒಳಗೆ ಹೊಸಾಡು ಗ್ರಾಮ ಪಂಚಾಯತ್ ಒಂದರಲ್ಲೆ ಚುನಾವಣೆ ಬಹಿಷ್ಕರಿಸುವ ಬ್ಯಾನರ್ ಅಳವಡಿಕೆ ಮಾಡಿರುವುದು ಇದು ಎರಡನೇ ಪ್ರಕರಣವಾಗಿದೆ.ಜ.21 ರ ಭಾನುವಾರ ದಂದು ಹೊಸಾಡು ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ನಿವಾಸಿಗಳು ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಿದ್ದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…