ಕುಂದಾಪುರ

ಚುನಾವಣೆ ಬಹಿಷ್ಕಾರದ ಎಚ್ಚರಿಕೆ,ಬ್ಯಾನರ್ ಅಳವಡಿಕೆ

Share

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕೇರಿಕೊಡ್ಲು ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡುವುದರ ಮುಖೇನ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರ
ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮದ ಕೇರಿಕೊಡ್ಲು ಭಾಗದ ನಿವಾಸಿಗಳಿಗೆ ಸುಸಜ್ಜಿತವಾದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಹೊಂದುವುದು ಕನಸಿನ ಮಾತೆ ಎಂದು ಭಾಸವಾಗುತ್ತಿದೆ.ಕಳೆದ ಮುವತ್ತು ವರ್ಷಗಳಿಂದ ಸ್ಥಳೀಯರು ಸಲ್ಲಿಕೆ ಮಾಡುತ್ತಿರುವ ಅಹವಾಲಿಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಒಂದು ಬಾರಿಯೂ ಸ್ಪಂದನೆ ಮಾಡಿಲ್ಲ.ಮಳೆಗಾಲದಲ್ಲಿ ಕೇಸರಿನ ರಾಡಿಯಿಂದ ಕೂಡಿರುವ ರಸ್ತೆಯಲ್ಲಿ ಸಾಗುವುದೆ ಅಲ್ಲಿನ ಜನರಿಗೆ ದುಸ್ತರವಾಗಿದೆ.ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕೇರಿಕೊಡ್ಲು ರಸ್ತೆಯನ್ನು ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಅಭಿವೃದ್ಧಿ ಪಡಿಸಲು ಜನಪ್ರತಿನಿಧಿಗಳು,ಅಧಿಕಾರಿಗಳು ಮುಂದಾಗದೆ ಇದ್ದರೆ ಚುನಾವಣೆಯಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಕೆಂಪು ಧೂಳಿನಿಂದ ಕೂಡಿದ್ದರೆ/ಮಳೆಗಾಲದಲ್ಲಿ ಕೇಸರು ರಾಡಿಯಿಂದ ಕೂಡಿರುತ್ತದೆ.

ಚುನಾವಣೆ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ:ಕೇರಿಕೊಡ್ಲು ಪರಿಸರದಲ್ಲಿ 20ಕ್ಕೂ ಅಧಿಕ ಮನೆಗಳಿವೆ, ಅಂದಾಜು 120ಕ್ಕೂ ಅಧಿಕ ಮತಗಳಿವೆ.ಊರಿನ ಅಭಿವೃದ್ಧಿಯನ್ನು ಕಡೆಗಣಿಸಿದ್ದರಿಂದ ಬೇಸತ್ತ ಅಲ್ಲಿನ ನಾಗರಿಕರು ಚುನಾವಣೆಯನ್ನೆ ಬಹಿಷ್ಕರಿಸುವ ನಿರ್ಧಾರಕ್ಕೆ ಮುಂದಾಗಿದ್ದಾರೆ.ಅದರ ಭಾಗವಾಗಿ ಬ್ಯಾನರ್ ಅಳವಡಿಕೆಯನ್ನು ಕೂಡ ಮಾಡಿದ್ದಾರೆ.
ಮಣ್ಣಿನ ರಸ್ತೆಯಲ್ಲಿ ಸಂಕಟದ ಸಂಚಾರ:ಮೊವಾಡಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಕೇರಿಕೊಡ್ಲು ಭಾಗದ ಮಣ್ಣಿನ ರಸ್ತೆ ಸುಮಾರು 1.30 ಕಿ.ಮೀ ದೂರವನ್ನು ಹೊಂದಿದೆ ಆ ಭಾಗದ ನಿವಾಸಿಗಳಿಗೆ ಇದೆ ಪ್ರಮುಖ ರಸ್ತೆ ಆಗಿದ್ದು ಒಂದು ಬಾರಿಯೂ ಅಭಿವೃದ್ಧಿ ಆಗಿಲ್ಲ.ಮಣ್ಣಿನಿಂದ ಕೂಡಿದ ಕೇರಿಕೊಡ್ಲು ರಸ್ತೆ ಬೇಸಿಗೆಯಲ್ಲಿ ಕೆಂಪು ಧೂಳಿನಿಂದ ಕೂಡಿದ್ದರೆ,ಮಳೆಗಾಲದಲ್ಲಿ ಕೇಸರು ರಾಡಿಯಿಂದ ಕೂಡಿರುತ್ತದೆ.ಸಂಪೂರ್ಣವಾಗಿ ಹದಗೆಟ್ಟಿರುವ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕ್ಕೆನ್ನುವುದು ಗ್ರಾಮಸ್ಥರ ಆಗಹ್ರವಾಗಿದೆ.
ಹೊಸಾಡು ಗ್ರಾಮ ಒಂದರಲ್ಲೇ ಇದು ಎರಡನೇ ಪ್ರರಕರಣ:ಕಳೆದ ಒಂದು ವಾರದ ಒಳಗೆ ಹೊಸಾಡು ಗ್ರಾಮ ಪಂಚಾಯತ್ ಒಂದರಲ್ಲೆ ಚುನಾವಣೆ ಬಹಿಷ್ಕರಿಸುವ ಬ್ಯಾನರ್ ಅಳವಡಿಕೆ ಮಾಡಿರುವುದು ಇದು ಎರಡನೇ ಪ್ರಕರಣವಾಗಿದೆ.ಜ.21 ರ ಭಾನುವಾರ ದಂದು ಹೊಸಾಡು ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ನಿವಾಸಿಗಳು ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago