ಕುಂದಾಪುರ

ಮರವಂತೆ:ಶ್ರೀನಾಗ ಶ್ರೀ ಅಜ್ಜಮ್ಮ ಪರಿವಾರ ದೇವರುಗಳ ನವೀಕೃತ ದೈವಾಲಯ ಲೋಕಾರ್ಪಣೆ

Share

Advertisement
Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ನೀರೋಣಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀನಾಗ ಶ್ರೀ ಅಜ್ಜಮ್ಮ ಪರಿವಾರ ದೇವರುಗಳ ನವೀಕೃತ ದೈವಾಲಯ ಲೋಕಾರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಗುರುವಾರ ಸಂಪನ್ನಗೊಂಡಿತು.

Advertisement

ನವೀಕೃತ ದೈವಾಲಯದ ಪ್ರಯುಕ್ತ ಪಂಚವಿಂಶತಿ ಕಲಶ ಪ್ರತಿಷ್ಠೆ,ಪ್ರಧಾನಯಾಗ ಜರುಗಿತು.ಮೀನಲಗ್ನ ಸಮುಹೂರ್ತದಲ್ಲಿ ಶ್ರೀಅಜಮ್ಮ ಪರಿವಾರ ಶಕ್ತಿಗಳ ಸಾನಿಧ್ಯಾಭಿವೃದ್ಧಿಗೊಳಿಸಿ ಸಾನಿಧ್ಯ ಕಲಶಾಭಿಷೇಕ,ಪ್ರಸನ್ನ ಪೂಜೆ,ಪಲ್ಲಪೂಜೆ,ಮಹಾ ಅನ್ನಸಂತರ್ಪಣೆ,ಆಶ್ಲೇಷ ಬಲಿ,ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.

ಸೌಪರ್ಣಿಕಾ ನದಿ ಭಾಗದಲ್ಲಿ ನೆಲೆಸಿರುವ ಶ್ರೀನಾಗ ಶ್ರೀಅಜ್ಜಮ್ಮ ಪರಿವಾರ ಶಕ್ತಿಗಳ ದೈವಸ್ಥಾನಕ್ಕೆ ಪೌರಾಣಿಕ ಇತಿಹಾಸವಿದೆ.ಶ್ರೀಧರ ಸ್ವಾಮಿಗಳು ತಪಸ್ಸಿಗೆ ಕುಳಿತಿರುವ ಜಾಗವು ಇದಾಗಿದ್ದು ಪುಣ್ಯ ಭೂಮಿಯಾಗಿದೆ.ಆರೂಢ ಪ್ರಶ್ನೆಯಲ್ಲಿ ತಿಳಿದು ಬಂತಂತಹ ವಿಚಾರದ ಮೂಲಕ ಬೆಂಗಳೂರು ಹೊಟೇಲ್ ಉದ್ಯಮಿ ಯಾಗಿರುವ ಎನ್.ರವೀಂದ್ರ ಹೆಬ್ಬಾರ್ ಮರವಂತೆ ಅವರು ಮುಂದಾಳತ್ವ ವಹಿಸಿಕೊಂಡು ಊರಿನವರ ಸಹಕಾರದಿಂದ ಅರ್ಜೀಣಾವಸ್ಥೆಯಲ್ಲಿರುವ ಪುರಾತನ ದೈವಾಲಯವನ್ನು ನಿರ್ಮಿಸಿದ್ದಾರೆ.ದೇವಾಲಯದ ನಿರ್ಮಾಣಕ್ಕೆ ಮರವಂತೆ ದೇವಾಡಿಗ ಕುಟುಂಬಸ್ಥರು ಜಾಗವನ್ನು ಬಿಟ್ಟು ಕೊಡುವುದರ ಮೂಲಕ ನೂತನ ದೈವಾಲಯದ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಊರಿನ ಹಿರಿಯರಾದ ವಿನಾಯಕ ರಾವ್ ಮಾತನಾಡಿ,ಸುಮಾರು 60 ವರ್ಷಗಳಿಂದ ಅಜೀರ್ಣವಸ್ಥೆಯಲ್ಲಿರುವ ದೇವಾಲಯ ಇಂದು ಲೋಕಾರ್ಪಣೆ ಗೊಂಡಿರುವುದು ಬಹಳಷ್ಟು ಖುಷಿ ಕೊಡುವಂತಹ ವಿಚಾರವಾಗಿದೆ.ಶ್ರೀಧರ ಸ್ವಾಮಿಗಳು ತಪಸ್ಸನ್ನು ಆಚರಿಸಿದ ಪುಣ್ಯ ಭೂಮಿಗೆ ಇಂದು ತುಂಬು ಚೈತನ್ಯ ದೊರಕುವುದರ ಜತೆಗೆ ಶ್ರೀನಾಗ ಶ್ರೀ ಅಜ್ಜಮ್ಮ ಸಹಿತ ಪರಿವಾರ ಶಕ್ತಿ ದೈವರುಗಳ ಪ್ರತಿಷ್ಠಾಪನೆ ಕೂಡ ಆಗಿರುವುದರಿಂದ ಊರಿಗೆ ಮತ್ತು ಜಗತ್ತಿಗೆ ಒಳಿತಾಗಲಿದೆ ಎಂದು ಹೇಳಿದರು.

ದೈವಾಲಯದ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಂಡಿರುವ ಪ್ರಮುಖರಾದ ಗೋಪಾಲ ದೇವಾಡಿಗ ಮರವಂತೆ ಮಾತನಾಡಿ,ಕಾಡಿನ ಮಧ್ಯೆ ಹುಲ್ಲಿನಿಂದ ಕೂಡಿದ ದೈವಸ್ಥಾನ ಇರುವುದು 60 ವರ್ಷಗಳಿಂದ ನೋಡಿಕೊಂಡು ಬರಲಾಗುತ್ತಿದೆ.ಪ್ರಶ್ನಾ ಚಿಂತನಾ ಕಾರ್ಯದ ಮೂಲಕ ಅರ್ಜೀಣಾವಸ್ಥೆಯಲ್ಲಿದ್ದ ದೈವಾಲಯವನ್ನು ಸ್ಥಳದ ಭಕ್ತರಾದ ಬೆಂಗಳೂರು ಹೋಟೆಲ್ ಉದ್ಯಮಿ ಎನ್.ರವೀಂದ್ರ ಹೆಬ್ಬಾರ್ ಅವರ ಮುಂದಾಳತ್ವದಲ್ಲಿ,ಗ್ರಾಮಸ್ಥರ ಸಹಕಾರದಿಂದ ನವೀಕೃತ ದೈವಾಲಯದ ಪ್ರತಿಷ್ಠಾ ಮಹೋತ್ಸವ ಕಾರ್ಯ ವಿಜೃಂಭಣೆಯಿಂದ ನಡೆಯಿತು ಎಂದರು.ಇವೊಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು.

 ಸ್ಥಳದಾನವನ್ನು ಮಾಡಿರುವ ಪುಟ್ಟು ಕಾಡಿಮನೆ ಮರವಂತೆ ಕುಟುಂಬದ ಸದಸ್ಯರಾದ ಸಂತೋಷ ದೇವಾಡಿಗ ಮಾತನಾಡಿ,ಕಳೆದ 60 ವರ್ಷಗಳಿಂದ ಇವೊಂದು ದೈವಸ್ಥಾನ ಶಿಥಿಲಾವಸ್ಥೆಗೆ ತಲುಪಿದ್ದು ದಾನಿಗಳ ಸಹಕಾರ ಮತ್ತು ಭಕ್ತರ ಭಕ್ತಿಯಿಂದ ನೂತನ ದೈವಾಲಯ ನಿರ್ಮಾಣಗೊಂಡಿದೆ.ಶೃದ್ಧೆ ಮತ್ತು ಭಕ್ತಿಯಿಂದ ದೈವಾಲಯದ ನಿರ್ಮಾಣಕ್ಕೆ ಬೇಕಾದಷ್ಟು ಜಾಗವನ್ನು ನೀಡಲಾಗಿದೆ ಎಂದು ಹೇಳಿದರು.ದೇವರ ಜಾಗವನ್ನು ದೇವರಿಗೆ ನೀಡಿರುವುದು ಬಹಳಷ್ಟು ಖುಷಿ ಕೊಟ್ಟಿದೆ ಎಂದರು.ಈ ಸಂದರ್ಭ ಗ್ರಾಮಸ್ಥರು ಉಸ್ಥಿತರಿದ್ದರು.

ವರದಿ:ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago