ಕುಂದಾಪುರ

ಮರವಂತೆ:ಶ್ರೀನಾಗ ಶ್ರೀ ಅಜ್ಜಮ್ಮ ಪರಿವಾರ ದೇವರುಗಳ ನವೀಕೃತ ದೈವಾಲಯ ಲೋಕಾರ್ಪಣೆ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ನೀರೋಣಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀನಾಗ ಶ್ರೀ ಅಜ್ಜಮ್ಮ ಪರಿವಾರ ದೇವರುಗಳ ನವೀಕೃತ ದೈವಾಲಯ ಲೋಕಾರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಗುರುವಾರ ಸಂಪನ್ನಗೊಂಡಿತು.

Advertisement

ನವೀಕೃತ ದೈವಾಲಯದ ಪ್ರಯುಕ್ತ ಪಂಚವಿಂಶತಿ ಕಲಶ ಪ್ರತಿಷ್ಠೆ,ಪ್ರಧಾನಯಾಗ ಜರುಗಿತು.ಮೀನಲಗ್ನ ಸಮುಹೂರ್ತದಲ್ಲಿ ಶ್ರೀಅಜಮ್ಮ ಪರಿವಾರ ಶಕ್ತಿಗಳ ಸಾನಿಧ್ಯಾಭಿವೃದ್ಧಿಗೊಳಿಸಿ ಸಾನಿಧ್ಯ ಕಲಶಾಭಿಷೇಕ,ಪ್ರಸನ್ನ ಪೂಜೆ,ಪಲ್ಲಪೂಜೆ,ಮಹಾ ಅನ್ನಸಂತರ್ಪಣೆ,ಆಶ್ಲೇಷ ಬಲಿ,ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.

ಸೌಪರ್ಣಿಕಾ ನದಿ ಭಾಗದಲ್ಲಿ ನೆಲೆಸಿರುವ ಶ್ರೀನಾಗ ಶ್ರೀಅಜ್ಜಮ್ಮ ಪರಿವಾರ ಶಕ್ತಿಗಳ ದೈವಸ್ಥಾನಕ್ಕೆ ಪೌರಾಣಿಕ ಇತಿಹಾಸವಿದೆ.ಶ್ರೀಧರ ಸ್ವಾಮಿಗಳು ತಪಸ್ಸಿಗೆ ಕುಳಿತಿರುವ ಜಾಗವು ಇದಾಗಿದ್ದು ಪುಣ್ಯ ಭೂಮಿಯಾಗಿದೆ.ಆರೂಢ ಪ್ರಶ್ನೆಯಲ್ಲಿ ತಿಳಿದು ಬಂತಂತಹ ವಿಚಾರದ ಮೂಲಕ ಬೆಂಗಳೂರು ಹೊಟೇಲ್ ಉದ್ಯಮಿ ಯಾಗಿರುವ ಎನ್.ರವೀಂದ್ರ ಹೆಬ್ಬಾರ್ ಮರವಂತೆ ಅವರು ಮುಂದಾಳತ್ವ ವಹಿಸಿಕೊಂಡು ಊರಿನವರ ಸಹಕಾರದಿಂದ ಅರ್ಜೀಣಾವಸ್ಥೆಯಲ್ಲಿರುವ ಪುರಾತನ ದೈವಾಲಯವನ್ನು ನಿರ್ಮಿಸಿದ್ದಾರೆ.ದೇವಾಲಯದ ನಿರ್ಮಾಣಕ್ಕೆ ಮರವಂತೆ ದೇವಾಡಿಗ ಕುಟುಂಬಸ್ಥರು ಜಾಗವನ್ನು ಬಿಟ್ಟು ಕೊಡುವುದರ ಮೂಲಕ ನೂತನ ದೈವಾಲಯದ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಊರಿನ ಹಿರಿಯರಾದ ವಿನಾಯಕ ರಾವ್ ಮಾತನಾಡಿ,ಸುಮಾರು 60 ವರ್ಷಗಳಿಂದ ಅಜೀರ್ಣವಸ್ಥೆಯಲ್ಲಿರುವ ದೇವಾಲಯ ಇಂದು ಲೋಕಾರ್ಪಣೆ ಗೊಂಡಿರುವುದು ಬಹಳಷ್ಟು ಖುಷಿ ಕೊಡುವಂತಹ ವಿಚಾರವಾಗಿದೆ.ಶ್ರೀಧರ ಸ್ವಾಮಿಗಳು ತಪಸ್ಸನ್ನು ಆಚರಿಸಿದ ಪುಣ್ಯ ಭೂಮಿಗೆ ಇಂದು ತುಂಬು ಚೈತನ್ಯ ದೊರಕುವುದರ ಜತೆಗೆ ಶ್ರೀನಾಗ ಶ್ರೀ ಅಜ್ಜಮ್ಮ ಸಹಿತ ಪರಿವಾರ ಶಕ್ತಿ ದೈವರುಗಳ ಪ್ರತಿಷ್ಠಾಪನೆ ಕೂಡ ಆಗಿರುವುದರಿಂದ ಊರಿಗೆ ಮತ್ತು ಜಗತ್ತಿಗೆ ಒಳಿತಾಗಲಿದೆ ಎಂದು ಹೇಳಿದರು.

ದೈವಾಲಯದ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಂಡಿರುವ ಪ್ರಮುಖರಾದ ಗೋಪಾಲ ದೇವಾಡಿಗ ಮರವಂತೆ ಮಾತನಾಡಿ,ಕಾಡಿನ ಮಧ್ಯೆ ಹುಲ್ಲಿನಿಂದ ಕೂಡಿದ ದೈವಸ್ಥಾನ ಇರುವುದು 60 ವರ್ಷಗಳಿಂದ ನೋಡಿಕೊಂಡು ಬರಲಾಗುತ್ತಿದೆ.ಪ್ರಶ್ನಾ ಚಿಂತನಾ ಕಾರ್ಯದ ಮೂಲಕ ಅರ್ಜೀಣಾವಸ್ಥೆಯಲ್ಲಿದ್ದ ದೈವಾಲಯವನ್ನು ಸ್ಥಳದ ಭಕ್ತರಾದ ಬೆಂಗಳೂರು ಹೋಟೆಲ್ ಉದ್ಯಮಿ ಎನ್.ರವೀಂದ್ರ ಹೆಬ್ಬಾರ್ ಅವರ ಮುಂದಾಳತ್ವದಲ್ಲಿ,ಗ್ರಾಮಸ್ಥರ ಸಹಕಾರದಿಂದ ನವೀಕೃತ ದೈವಾಲಯದ ಪ್ರತಿಷ್ಠಾ ಮಹೋತ್ಸವ ಕಾರ್ಯ ವಿಜೃಂಭಣೆಯಿಂದ ನಡೆಯಿತು ಎಂದರು.ಇವೊಂದು ಪುಣ್ಯ ಕಾರ್ಯದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು.

 ಸ್ಥಳದಾನವನ್ನು ಮಾಡಿರುವ ಪುಟ್ಟು ಕಾಡಿಮನೆ ಮರವಂತೆ ಕುಟುಂಬದ ಸದಸ್ಯರಾದ ಸಂತೋಷ ದೇವಾಡಿಗ ಮಾತನಾಡಿ,ಕಳೆದ 60 ವರ್ಷಗಳಿಂದ ಇವೊಂದು ದೈವಸ್ಥಾನ ಶಿಥಿಲಾವಸ್ಥೆಗೆ ತಲುಪಿದ್ದು ದಾನಿಗಳ ಸಹಕಾರ ಮತ್ತು ಭಕ್ತರ ಭಕ್ತಿಯಿಂದ ನೂತನ ದೈವಾಲಯ ನಿರ್ಮಾಣಗೊಂಡಿದೆ.ಶೃದ್ಧೆ ಮತ್ತು ಭಕ್ತಿಯಿಂದ ದೈವಾಲಯದ ನಿರ್ಮಾಣಕ್ಕೆ ಬೇಕಾದಷ್ಟು ಜಾಗವನ್ನು ನೀಡಲಾಗಿದೆ ಎಂದು ಹೇಳಿದರು.ದೇವರ ಜಾಗವನ್ನು ದೇವರಿಗೆ ನೀಡಿರುವುದು ಬಹಳಷ್ಟು ಖುಷಿ ಕೊಟ್ಟಿದೆ ಎಂದರು.ಈ ಸಂದರ್ಭ ಗ್ರಾಮಸ್ಥರು ಉಸ್ಥಿತರಿದ್ದರು.

ವರದಿ:ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

20 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago