ಕುಂದಾಪುರ:ಕರ್ನಾಟಕ ಕರಾವಳಿ ಪ್ರಸಿದ್ಧ ಮಾರಿ ಜಾತ್ರೆ ಎಂದೆ ಹೆಸರುವಾಸಿಯಾದ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಗ್ರಾಮ ದೇವತೆಯಾದ ಶ್ರೀಮಹಾಂಕಾಳಿ ಅಮ್ಮನವರ ಎರಡನೇ ದಿನದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಸಂಪ್ರದಾಯ ಬದ್ಧವಾಗಿ ನಡೆಯಿತು.
ಶ್ರೀಮಹಾಂಕಾಳಿ ಅಮ್ಮನವರ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀದೇವಿಗೆ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಶ್ರೀದೇವರ ಸಂದರ್ಶನ ಹಾಗೂ ಪ್ರಸಾದ ವಿತರಣೆ ಜರುಗಿತು.
ಅಕ್ಕಿರೊಟ್ಟಿ ಪ್ರಸಾದ ವಿತರಣೆ:ಶ್ರೀದೇವಿಗೆ ಸಮರ್ಪಿಸಿದ ಅಕ್ಕಿಯಿಂದ ಮಾಡಿದ ರೊಟ್ಟಿ ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ.ಅಮ್ಮನವರ ಪ್ರಸಾದವನ್ನು ಸ್ವೀಕರಿಸಲೆಂದೆ,ಕುಂದಾಪು,ಬೈಂದೂರು ಭಾಗದ ಭಕ್ತರು ಸೇರಿದಂತೆ,ಭಟ್ಕಳ,ಹೊನ್ನವಾರ,ಕಾರವಾರ,ಉಡುಪಿ,ಮಂಗಳೂರು ಭಾಗದಿಂದಲೂ ಆಗಮಿಸುತ್ತಾರೆ.ಅಕ್ಕಿ ರೊಟ್ಟಿ ಪ್ರಸಾದವನ್ನು ನೀಡುವುದು ಶ್ರೀಮಾರಿಕಾಂಬೆ ದೇವಿಯ ಜಾತ್ರೆಯ ವಿಶೇಷತೆ ಆಗಿದೆ.ಇಲ್ಲಿ ವಿತರಿಸುವ ಪ್ರಸಾದ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದು ಹಿರಿಯರಾದ ರಾಮಪ್ಪ ಖಾರ್ವಿ ಅವರು ಹೇಳುತ್ತಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…