ಮುಂಬೈ (ಫೆ.2):ಹಾಟ್ ನಟಿ ಎಂದೇ ಹೆಸರುವಾಸಿಯಾಗಿರುವ ಪೂನಂ ಪಾಂಡೆ ಅವರು ಕ್ಯಾನ್ಸರ್ನಿಂದ ತಮ್ಮ 32ನೇ ವಯಸ್ಸಿನಲ್ಲೇ ಸಾವನನ್ನಪ್ಪಿದ್ದಾರೆ.ಅವರ ಮ್ಯಾನೇಜರ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಪೂನಮ್ ಪಾಂಡೆ ಅವರ ಮ್ಯಾನೇಜರ್ ಹಾಗೂ ಅವರ ಟೀಮ್ ಈ ಕುರಿತಾಗಿ ಇನ್ಸ್ಟಾಗ್ರಾಮ್ನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ.ಅಧಿಕೃತ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಬರೆದುಕೊಂಡಿರುವ ಟೀಮ್, ‘ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನವಾಗಿತ್ತು. ಗರ್ಭಕಂಠದ ಕ್ಯಾನ್ಸರ್ನ ಕಾರಣದಿಂದಾಗಿ ಇಂದು ನಾವು ಪೂನಮ್ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಕೆಯೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಗಳಿಗೂ ಶುದ್ಧ ಪ್ರತಿ ಹಾಗೂ ದಯೆಯಿಂದ ಭೇಟಿಯಾಗುತ್ತಿದ್ದರು.ಈ ದುಃಖದ ಸಮಯದಲ್ಲಿ ನಾವು ನಮ್ಮ ಖಾಸಗಿತನಕ್ಕಾಗಿ ವಿನಂತಿ ಮಾಡುತ್ತಿದ್ದೇವೆ.ಆಕೆಯೊಂದಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದೆ. ಫೆಬ್ರವರಿ 1 ರಂದು ಅವರ ನಿಧನವಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.
ಕಾನ್ಪುರದಲ್ಲಿ ನಿಧನ: ಪೂನಮ್ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು ಇನ್ನಷ್ಟೇ ಬರಬೇಕಿದೆ. ತಮ್ಮ ವಿವಾದಿತ ಮಾತುಗಳಿಂದಲೇ ಪ್ರಖ್ಯಾತಿ ಪಡೆದಿದ್ದ ಪೂನಮ್ ಪಾಂಡೆ, ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್ಗಳನ್ನು ಹೊಂದಿದ್ದರು.
2013ರಲ್ಲಿ ನಶಾ ಚಿತ್ರದ ಮೂಲಕ ಬಾಲಿವುಡ್ಗೆ ಲಗ್ಗೆ ಇಟ್ಟಿದ್ದ ಪೂನಮ್ ಪಾಂಡೆ ಅವರ ನಿಧನ ಅಭಿಮಾನಿಗಳಲ್ಲಿ ಆಘಾತಕ್ಕೆ ಕಾರಣವಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…