ದೇಶ-ವಿದೇಶ

ಹಾಟ್ ನಟಿ ಪೂನಂ ಪಾಂಡೆ ಕ್ಯಾನ್ಸರ್ ನಿಂದ ನಿಧನ

Share

ಮುಂಬೈ (ಫೆ.2):ಹಾಟ್‌ ನಟಿ ಎಂದೇ ಹೆಸರುವಾಸಿಯಾಗಿರುವ ಪೂನಂ ಪಾಂಡೆ ಅವರು ಕ್ಯಾನ್ಸರ್‌ನಿಂದ ತಮ್ಮ 32ನೇ ವಯಸ್ಸಿನಲ್ಲೇ ಸಾವನನ್ನಪ್ಪಿದ್ದಾರೆ.ಅವರ ಮ್ಯಾನೇಜರ್‌ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ‌ ಎಂದು ಬಲ್ಲ ಮೂಲಗಳು ತಿಳಿಸಿವೆ.
ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ.ಅಧಿಕೃತ ಇನ್ಸ್‌ಟಾಗ್ರಾಮ್‌ ಪೇಜ್‌ನಲ್ಲಿ ಬರೆದುಕೊಂಡಿರುವ ಟೀಮ್‌, ‘ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನವಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನ ಕಾರಣದಿಂದಾಗಿ ಇಂದು ನಾವು ಪೂನಮ್‌ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಕೆಯೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಂದು ಜೀವಗಳಿಗೂ ಶುದ್ಧ ಪ್ರತಿ ಹಾಗೂ ದಯೆಯಿಂದ ಭೇಟಿಯಾಗುತ್ತಿದ್ದರು.ಈ ದುಃಖದ ಸಮಯದಲ್ಲಿ ನಾವು ನಮ್ಮ ಖಾಸಗಿತನಕ್ಕಾಗಿ ವಿನಂತಿ ಮಾಡುತ್ತಿದ್ದೇವೆ.ಆಕೆಯೊಂದಿಗೆ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ಬರೆದುಕೊಂಡಿದೆ. ಫೆಬ್ರವರಿ 1 ರಂದು ಅವರ ನಿಧನವಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಕಾನ್ಪುರದಲ್ಲಿ ನಿಧನ: ಪೂನಮ್‌ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು ಇನ್ನಷ್ಟೇ ಬರಬೇಕಿದೆ. ತಮ್ಮ ವಿವಾದಿತ ಮಾತುಗಳಿಂದಲೇ ಪ್ರಖ್ಯಾತಿ ಪಡೆದಿದ್ದ ಪೂನಮ್‌ ಪಾಂಡೆ, ಸೋಶಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದ ಫಾಲೋವರ್‌ಗಳನ್ನು ಹೊಂದಿದ್ದರು.
2013ರಲ್ಲಿ ನಶಾ ಚಿತ್ರದ ಮೂಲಕ ಬಾಲಿವುಡ್‌ಗೆ ಲಗ್ಗೆ ಇಟ್ಟಿದ್ದ ಪೂನಮ್‌ ಪಾಂಡೆ ಅವರ ನಿಧನ ಅಭಿಮಾನಿಗಳಲ್ಲಿ ಆಘಾತಕ್ಕೆ ಕಾರಣವಾಗಿದೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

6 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago