ಕುಂದಾಪುರ

ಬಂಜರು ಭೂಮಿಗೆ ಜೀವ ತುಂಬುತ್ತಿರುವ ಪ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಕಿರಿಮಂಜೇಶ್ವರ

Share

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಿವಾಸಿಯಾಗಿರುವ ಸುಬ್ಬಣ್ಣ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಕೃಷಿ ಚಟುವಟಿಕೆ ಕಾರ್ಯದಲ್ಲಿ ತೊಡಗಿಕೊಳ್ಳುವುದರ ಮೂಲಕ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ.ತನ್ನ 17ನೇ ವಯಸ್ಸಿನಲ್ಲಿಯೇ ತಂದೆಯವರ ಜೊತೆ ಗದ್ದೆ ಕೆಲಸದಲ್ಲಿ ತೊಡಗಿಕೊಂಡಿರುವ ಅವರು ಕೃಷಿ ಕಾಯಕವನ್ನೆ ತನ್ನ ಮೂಲ ಉದ್ಯೋಗವನ್ನಾಗಿ ಮಾಡಿಕೊಂಡು ಕುಟುಂಬದ ಜತೆ ಸಂತೃಪ್ತಿಯಾದ ಜೀವನವನ್ನು ನಡೆಸುತ್ತಿದ್ದಾರೆ.ಕೃಷಿಯಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಸುಬ್ಬಣ್ಣ ಶೆಟ್ಟಿ ಅವರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ನಿಸ್ಸಿಮ್ಮರು.

ಹಡವು ಬಿದ್ದ ಭೂಮಿಗೆ ಚೈತನ್ಯ ನೀಡುವ ದೃಷ್ಟಿಯಿಂದ ಪಾಳು ಬಿದ್ದಿರುವ ಭೂಮಿಯನ್ನು ಲೀಜಿಗೆ ಪಡೆದುಕೊಂಡು ಕೃಷಿ ಮಾಡುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಸುಮಾರು 10 ಎಕರೆ ಕೃಷಿ ಭೂಮಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಕೃಷಿಯನ್ನು ಮಾಡುತ್ತಿದ್ದಾರೆ.

ಮುಂಗಾರಿನಲ್ಲಿ 8 ಎಕರೆ ಭೂಮಿಯಲ್ಲಿ ಭತ್ತವನ್ನು ಬೆಳೆಯುತ್ತಾರೆ,ಹಿಂಗಾರಿನಲ್ಲಿ 4 ಎಕರೆ ಪ್ರದೇಶದಲ್ಲಿ ನೆಲಗಡಲೆ ಹಾಗೂ ಇನ್ನುಳಿದ 4 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣನ್ನು ವರ್ಷದಲ್ಲಿ ಎರಡು ಬೆಳೆಯನ್ನು ಬೆಳೆಯುತ್ತಾರೆ.ಅವರ ಬಳಿ 1 ಎಕರೆ ಅಡಿಕೆ ತೋಟ ಸಹಿತ 100 ತೆಂಗಿನ ಮರಗಳಿವೆ.ದವಸ ಧಾನ್ಯವನ್ನಾಗಿ ಉದ್ದನ್ನು ಬೆಳೆಯುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಅವಡೆ ಸಹಿತ ಇನ್ನಿತರ ತರಕಾರಿಯನ್ನು ಸಹ ಬೆಳೆಯುತ್ತಾರೆ.ಹೈನುಗಾರಿಯಲ್ಲಿ ತೊಡಗಿಕೊಂಡಿರುವ ಸುಬ್ಬಣ್ಣ ಶೆಟ್ಟಿ ಅವರು ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿಯೂ ಜನಪ್ರಿಯ ಕೆಲಸವನ್ನು ಮಾಡುತ್ತಿದ್ದಾರೆ.ಪಂಚಾಯತ್ ಸದಸ್ಯರಾಗಿಯೂ ಸಾಮಾಜಿಕ ಕೆಲಸವನ್ನು ಮಾಡುತ್ತಿರುವ ಸುಬ್ಬಣ್ಣ ಶೆಟ್ಟಿ ಅವರು ಜನರ ಪ್ರೀತಿ ಗಳಿಸಿದ್ದಾರೆ.ಹವ್ಯಾಸಿ ಯಕ್ಷಗಾನ ಕಲಾವಿದರಾಗಿರುವ ಅವರು ಯಕ್ಷ ವೇದಿಕೆಯಲ್ಲಿ ಮಿಂಚಿನ ಗುಣಿತದ ಮೂಲಕ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ.

52 ವರ್ಷ ತುಂಬಿದ್ದರೂ ಅವರದ್ದು ಇನ್ನು ಹರೆಯದ ವಯಸ್ಸು ಎಂದೇ ಹೇಳಬಹುದು,ಉತ್ಸಾಹದಿಂದಲೇ ಕೃಷಿ ಕಾಯದಲ್ಲಿ ತೊಡಗಿಕೊಳ್ಳುವ ಸುಬ್ಬಣ್ಣ ಶೆಟ್ಟಿ ಅವರು ಸ್ವತಹ ಕೃಷಿ ಭೂಮಿಯಲ್ಲಿ ಕೆಲಸ ಮಾಡುವುದರ ಮೂಲಕ ವರ್ಷಕ್ಕೆ ಸುಮಾರು 600 ರಿಂದ 700 ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸವನ್ನು ಕೂಡ ನೀಡುತ್ತಿದ್ದಾರೆ.ರಾಜ್ಯಕೀಯ,ಸಾಮಾಜಿಕ,ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸುಬ್ಬಣ್ಣ ಶೆಟ್ಟಿ ಅವರು ಬೈಂದೂರು ತಾಲೂಕಿನ ಯಶಸ್ವಿ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ.ಯುವಕರಿಗೆ ಪ್ರೇರಣೆಯಾಗಿರುವ ಪಗ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಅವರ ಕೃಷಿ ಕಾಯಕಕ್ಕೆ ಮನ್ನಣೆ ಕೊಡುವ ಕೆಲಸ ಸರಕಾರ,ಇಲಾಖೆ ಮಾಡಬೇಕಾಗಿದೆ.

ಮೆಲೋಡಿ ಎನ್ನುವ ಹೊಸ ಕಲ್ಲಂಗಡಿ ಬೀಜದ ತಳಿಯನ್ನು ತನ್ನ ಭೂಮಿಯಲ್ಲಿ ಬೆಳೆಯುವುದರ ಮೂಲಕ ಉತ್ತಮ ಬೆಳೆಯನ್ನು ಬೆಳೆಯುತ್ತಿದ್ದಾರೆ.295- ನಾಮಧಾರಿ ಕ್ಕಿಂತ

ಕಪ್ಪು ಬಣ್ಣವನ್ನು ಹೊಂದಿರುವ ಮೆಲೋಡಿ ಕಲ್ಲಂಗಡಿ ಬೆಳೆ ಕರಾವಳಿ ಮಣ್ಣಿಗೆ ಸೂಕ್ತ ಎಂದು ಸುಬ್ಬಣ್ಣ ಶೆಟ್ಟಿ ಹೇಳುತ್ತಾರೆ.ತನ್ನ ಭೂಮಿಯಲ್ಲಿ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಆದಾಯವನ್ನು ಗಳಿಸುತ್ತಿದ್ದಾರೆ.

ಪ್ರಗತಿಪರ ಕೃಷಿಕರಾದ ಸುಬ್ಬಣ್ಣ ಶೆಟ್ಟಿ ಅವರು ಮಾತನಾಡಿ,ಏಳೆಯ ವಯಸ್ಸಿನಲ್ಲಿಯೇ ತಂದೆ ಮತ್ತು ಹಿರಿಯರ ಜತೆ ಕೃಷಿ ಕಾಯಕದಲ್ಲಿ ತೊಡಗಿಕೊಂಡಿದ್ದರಿಂದ ಕೃಷಿಯಲ್ಲಿ ಮುಂದುವರೆಯಲು ಸಾಧ್ಯವಾಗಿದೆ.ಭೂಮಿಯನ್ನು ಬಂಜರು ಗೈಯಬಾರದು ಎನ್ನುವ ಉದ್ದೇಶದಿಂದ ಹಡವು ಬಿದ್ದ ಭೂಮಿಯನ್ನು ಲೀಜಿಗೆ ಪಡೆದುಕೊಂಡು ಕಳೆದ 35 ವರ್ಷಗಳಿಂದ ಕೃಷಿ ಕೆಲಸ ಮಾಡುತ್ತಿದ್ದೇನೆ.ಕೃಷಿಯನ್ನು ಉದ್ಯೋಗವನ್ನಾಗಿ ಪರಿಗಣಿಸಿದಾಗ ಮಾತ್ರ ಲಾಭಾಂಶಗಳಿಸಲು ಸಾಧ್ಯವಿದೆ.ಬೈಂದೂರು ಭಾಗದಲ್ಲಿ ಕಲ್ಲಂಗಡಿ ಮತ್ತು ನೆಲಗಡಲೆ ಮುಖ್ಯವಾದ ಬೆಳೆಯಾಗಿರುವುದರಿಂದ ರೈತರನ್ನು ಪ್ರೋತ್ಸಾಹಿಸಿಸುವ ದೃಷ್ಟಿಯಿಂದ ಎರಡು ವರ್ಷಕ್ಕೊಮ್ಮೆ ಕೃಷಿ ಸಬ್ಸಿಡಿ ನೀಡಲು ಸರಕಾರ ಕ್ರಮ ಕೈಗೊಳ್ಳಬೇಕು ಎನ್ನುವುದು ಅವರ ಅಭಿಪ್ರಾಯವಾಗಿದೆ.

ವಿಶೇಷ ವರದಿ -ಜಗದೀಶ ದೇವಾಡಿಗ ಮುಳ್ಳಿಕಟ್ಟೆ
ಮೊಬೈಲ್ ಸಂಖ್ಯೆ -9916284048

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago