ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಗ್ರಾಮದ ಶ್ರೀಸ್ವರ್ಣಯಕ್ಷೀ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.ವರ್ಧಂತಿ ಉತ್ಸವದ ಅಂಗವಾಗಿ ಶ್ರೀದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ,ಸಾರ್ವಜನಿಕ ಅನ್ನತಂರ್ಪಣೆ ಕಾರ್ಯಕ್ರಮ ಜರುಗಿತು.ಗ್ರಾಮಸ್ಥರು ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದವನ್ನು ಸ್ವೀಕರಿಸಿದರು.
ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪಿಠಂ ಶೃಂಗೇರಿ ನಾಗ ಪಾತ್ರಿಗಳಾದ ವೇ.ಮೂ.ಲೋಕೇಶ್ ಅಡಿಗ ಬಡಾಕೆರೆ ನಾವುಂದ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ವೇ.ಮೂ ಲಕ್ಷ್ಮೀಶ ಅಡಿಗ ಅವರು ಧಾರ್ಮಿಕ ಪ್ರವಚನ ನೀಡಿ ಮಾತನಾಡಿ,ಅರ್ಚಕರ ಪ್ರಭಾವ ಮತ್ತು ಮಂತ್ರ ಶಕ್ತಿಯಿಂದ ಬಿಂಬವೂ ದೇವರಾಗಿ ಮಾರ್ಪಾಟಾಗುತ್ತದೆ ಎಂದು ಶಾಸ್ತ್ರದಲ್ಲಿ ಉಲ್ಲೇಖ ಮಾಡಲಾಗಿದೆ.ಅದೇ ಪ್ರಕಾರ ಬಡಾಕೆರೆ ಶ್ರೀಸ್ವರ್ಣಯಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶ ಸ್ಥಾಪನೆ,ದುರ್ಗಾಹೋಮ ಸೇರಿದಂತೆ ನಾನಾ ಧಾರ್ಮಿಕ ಪೂಜೆ ಕೈಂಕರ್ಯಗಳನ್ನು ಮಾಡಲಾಗಿದೆ ಎಂದು ಹೇಳಿದರು.ಸರ್ವರಿಗೂ ದೇವರು ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ ಶ್ರೀಮತಿ ಶಾಂತ ಮಾಧವ ಅಡಿಗ ಮತ್ತು ಮನೆಯವರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…