ಕುಂದಾಪುರ

ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಬೇಕು

Share

ಕುಂದಾಪುರ:ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಿ ಕೌಶಲ್ಯವೃದ್ಧಿಯಿಂದ ಇನ್ನಷ್ಟು ಚೆಂದವಾಗಿಸುವ ಕೆಲಸ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ಅಗತ್ಯವಿದ್ದವರಿಗೆ ಇನ್ನಷ್ಟು ತರಬೇತಿಯನ್ನು ಇಲಾಖೆಯಿಂದ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು.
ಕರ್ನಾಟಕ ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉಡುಪಿ ಜಿಲ್ಲಾಡಳಿತ,ಐ.ಟಿ.ಡಿ.ಪಿ. ಉಡುಪಿ ಮತ್ತು ಉಡುಪಿ ಜಿಲ್ಲಾ ಕೊರಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪಡುಕೋಣೆ ಸುನೀತಾ ಅವರ ಮನೆ ವಠಾರದಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿರುವ ಬಿದಿರಿನ ಬುಟ್ಟಿ ತಯಾರಿಕಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ,ಮಾತನಾಡಿದರು.
ಆಧುನಿಕ ಕಾಲಘಟ್ಟದಲ್ಲಿ ಸಮುದಾಯದ ಬೆಳವಣಿಗೆಗೆ ಶಿಕ್ಷಣವಂತರಾಗುವುದು ಅತ್ಯಗತ್ಯವಾಗಿದೆ ಅದರ ಜತೆಗೆ ರಕ್ತಗತವಾಗಿ ಬಂದಿರುವ ನಮ್ಮ ಕುಲ ಕಸುಬನ್ನು ನಶಿಸಿ ಹೋಗದಂತೆ ಕಾಪಾಡುವ ಹೊಣೆಗಾರಿಕೆ ಕೂಡ ನಮ್ಮೆಲ್ಲರದಾಗಿದೆ ಎಂದರು.
ಬÉೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ,ಪರಂಪರೆಯ ಕುಲ ಕಸುಬುಗಳನ್ನು ಇನ್ನಷ್ಟು ಉತ್ತೇಜಿಸುವ ಸಲುವಾಗಿ ಕಚ್ಚಾವಸ್ತುಗಳ ಪೂರೈಕೆ ಸಹಿತ ಉತ್ತಮ ಮಾರುಕಟ್ಟೆ ಒದಗಿಸುವ ಕಾರ್ಯ ಆಗಬೇಕಾಗಿದೆ ಎಂದು ಹೇಳಿದರು.
ನಾಡ ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು.ಗ್ರಾ.ಪಂ ಸದಸ್ಯರಾದ ಅರವಿಂದ ಪೂಜಾರಿ,ಶೋಭಾ,ಮಮತಾ ರಾಜು ಪಡುಕೋಣೆ ಮಾಜಿ ಸದಸ್ಯ ರಾಮ ಪೂಜಾರಿ,ತರಬೇತುದಾರರಾದ ಬಾಬು ಹಾಗೂ ದೀಪಾ,ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಉಡುಪಿ ದೂದ್‍ಪೀರ್,ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ. ಪ್ರಸ್ತಾವಿಕವಾಗಿ ಮಾತನಾಡಿದರು. ಇಲಾಖೆಯ ಸಿಬಂದ್ದಿ ನಾಗರಾಜ ಖಾರ್ವಿ ಸ್ವಾಗತಿಸಿದರು.ವ್ಯವಸ್ಥಾಪಕ ರಾಮಕೃಷ್ಣ ನಿರೂಪಿಸಿದರು.ಕೌನ್ಸಿಲರ್ ಸಂಧ್ಯಾರಾಣಿ ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago