ಕುಂದಾಪುರ

ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಬೇಕು

Share

Advertisement
Advertisement

ಕುಂದಾಪುರ:ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಿ ಕೌಶಲ್ಯವೃದ್ಧಿಯಿಂದ ಇನ್ನಷ್ಟು ಚೆಂದವಾಗಿಸುವ ಕೆಲಸ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ಅಗತ್ಯವಿದ್ದವರಿಗೆ ಇನ್ನಷ್ಟು ತರಬೇತಿಯನ್ನು ಇಲಾಖೆಯಿಂದ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು.
ಕರ್ನಾಟಕ ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉಡುಪಿ ಜಿಲ್ಲಾಡಳಿತ,ಐ.ಟಿ.ಡಿ.ಪಿ. ಉಡುಪಿ ಮತ್ತು ಉಡುಪಿ ಜಿಲ್ಲಾ ಕೊರಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪಡುಕೋಣೆ ಸುನೀತಾ ಅವರ ಮನೆ ವಠಾರದಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿರುವ ಬಿದಿರಿನ ಬುಟ್ಟಿ ತಯಾರಿಕಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ,ಮಾತನಾಡಿದರು.
ಆಧುನಿಕ ಕಾಲಘಟ್ಟದಲ್ಲಿ ಸಮುದಾಯದ ಬೆಳವಣಿಗೆಗೆ ಶಿಕ್ಷಣವಂತರಾಗುವುದು ಅತ್ಯಗತ್ಯವಾಗಿದೆ ಅದರ ಜತೆಗೆ ರಕ್ತಗತವಾಗಿ ಬಂದಿರುವ ನಮ್ಮ ಕುಲ ಕಸುಬನ್ನು ನಶಿಸಿ ಹೋಗದಂತೆ ಕಾಪಾಡುವ ಹೊಣೆಗಾರಿಕೆ ಕೂಡ ನಮ್ಮೆಲ್ಲರದಾಗಿದೆ ಎಂದರು.
ಬÉೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ,ಪರಂಪರೆಯ ಕುಲ ಕಸುಬುಗಳನ್ನು ಇನ್ನಷ್ಟು ಉತ್ತೇಜಿಸುವ ಸಲುವಾಗಿ ಕಚ್ಚಾವಸ್ತುಗಳ ಪೂರೈಕೆ ಸಹಿತ ಉತ್ತಮ ಮಾರುಕಟ್ಟೆ ಒದಗಿಸುವ ಕಾರ್ಯ ಆಗಬೇಕಾಗಿದೆ ಎಂದು ಹೇಳಿದರು.
ನಾಡ ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು.ಗ್ರಾ.ಪಂ ಸದಸ್ಯರಾದ ಅರವಿಂದ ಪೂಜಾರಿ,ಶೋಭಾ,ಮಮತಾ ರಾಜು ಪಡುಕೋಣೆ ಮಾಜಿ ಸದಸ್ಯ ರಾಮ ಪೂಜಾರಿ,ತರಬೇತುದಾರರಾದ ಬಾಬು ಹಾಗೂ ದೀಪಾ,ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಉಡುಪಿ ದೂದ್‍ಪೀರ್,ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ. ಪ್ರಸ್ತಾವಿಕವಾಗಿ ಮಾತನಾಡಿದರು. ಇಲಾಖೆಯ ಸಿಬಂದ್ದಿ ನಾಗರಾಜ ಖಾರ್ವಿ ಸ್ವಾಗತಿಸಿದರು.ವ್ಯವಸ್ಥಾಪಕ ರಾಮಕೃಷ್ಣ ನಿರೂಪಿಸಿದರು.ಕೌನ್ಸಿಲರ್ ಸಂಧ್ಯಾರಾಣಿ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

15 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago