ಕುಂದಾಪುರ

ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಬೇಕು

Share

ಕುಂದಾಪುರ:ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಿ ಕೌಶಲ್ಯವೃದ್ಧಿಯಿಂದ ಇನ್ನಷ್ಟು ಚೆಂದವಾಗಿಸುವ ಕೆಲಸ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ಅಗತ್ಯವಿದ್ದವರಿಗೆ ಇನ್ನಷ್ಟು ತರಬೇತಿಯನ್ನು ಇಲಾಖೆಯಿಂದ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು.
ಕರ್ನಾಟಕ ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉಡುಪಿ ಜಿಲ್ಲಾಡಳಿತ,ಐ.ಟಿ.ಡಿ.ಪಿ. ಉಡುಪಿ ಮತ್ತು ಉಡುಪಿ ಜಿಲ್ಲಾ ಕೊರಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪಡುಕೋಣೆ ಸುನೀತಾ ಅವರ ಮನೆ ವಠಾರದಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿರುವ ಬಿದಿರಿನ ಬುಟ್ಟಿ ತಯಾರಿಕಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ,ಮಾತನಾಡಿದರು.
ಆಧುನಿಕ ಕಾಲಘಟ್ಟದಲ್ಲಿ ಸಮುದಾಯದ ಬೆಳವಣಿಗೆಗೆ ಶಿಕ್ಷಣವಂತರಾಗುವುದು ಅತ್ಯಗತ್ಯವಾಗಿದೆ ಅದರ ಜತೆಗೆ ರಕ್ತಗತವಾಗಿ ಬಂದಿರುವ ನಮ್ಮ ಕುಲ ಕಸುಬನ್ನು ನಶಿಸಿ ಹೋಗದಂತೆ ಕಾಪಾಡುವ ಹೊಣೆಗಾರಿಕೆ ಕೂಡ ನಮ್ಮೆಲ್ಲರದಾಗಿದೆ ಎಂದರು.
ಬÉೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ,ಪರಂಪರೆಯ ಕುಲ ಕಸುಬುಗಳನ್ನು ಇನ್ನಷ್ಟು ಉತ್ತೇಜಿಸುವ ಸಲುವಾಗಿ ಕಚ್ಚಾವಸ್ತುಗಳ ಪೂರೈಕೆ ಸಹಿತ ಉತ್ತಮ ಮಾರುಕಟ್ಟೆ ಒದಗಿಸುವ ಕಾರ್ಯ ಆಗಬೇಕಾಗಿದೆ ಎಂದು ಹೇಳಿದರು.
ನಾಡ ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆ ವಹಿಸಿದ್ದರು.ಗ್ರಾ.ಪಂ ಸದಸ್ಯರಾದ ಅರವಿಂದ ಪೂಜಾರಿ,ಶೋಭಾ,ಮಮತಾ ರಾಜು ಪಡುಕೋಣೆ ಮಾಜಿ ಸದಸ್ಯ ರಾಮ ಪೂಜಾರಿ,ತರಬೇತುದಾರರಾದ ಬಾಬು ಹಾಗೂ ದೀಪಾ,ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಉಡುಪಿ ದೂದ್‍ಪೀರ್,ಕೊರಗ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಗಣೇಶ್ ಉಪಸ್ಥಿತರಿದ್ದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ. ಪ್ರಸ್ತಾವಿಕವಾಗಿ ಮಾತನಾಡಿದರು. ಇಲಾಖೆಯ ಸಿಬಂದ್ದಿ ನಾಗರಾಜ ಖಾರ್ವಿ ಸ್ವಾಗತಿಸಿದರು.ವ್ಯವಸ್ಥಾಪಕ ರಾಮಕೃಷ್ಣ ನಿರೂಪಿಸಿದರು.ಕೌನ್ಸಿಲರ್ ಸಂಧ್ಯಾರಾಣಿ ವಂದಿಸಿದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago