ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮ
ಕುಂದಾಪುರ:ಬಿಜೆಪಿ ಬೈಂದೂರು ಮಂಡಲ ವತಿಯಿಂದ ಗ್ರಾಮ ಚಲೋ ಅಭಿಯಾನ ಕಾರ್ಯಾಗಾರ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.ಮಂಗಳೂರು ವಿಭಾಗ ಸಹ ಪ್ರಭಾರಿ ರಾಜೇಶ್ ಕಾವೇರಿ ಅಭಿಯಾನದ ಕುರಿತು ಮಾಹಿತಿ ನೀಡಿದರು.ಗ್ರಾಮ ಚಲೋ ಅಭಿಯಾನದ ಮಂಡಲ ಸಹ ಸಂಚಾಲಕ ಸಾಮ್ರಾಟ್ ಶೆಟ್ಟಿ,ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ಮಹೇಂದ್ರ ಪೂಜಾರಿ ಸ್ವಾಗತಿಸಿದರು.ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ವಂದಿಸಿದರು.