ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ಮಂಗಳೂರು:ನೂತನ ಮನೆ ಕೀಲಿಕೈ ಹಸ್ತಾಂತರ


ಮಂಗಳೂರು:ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿ ನಿಲಯ” ನೂತನ ಮನೆಯ ಕೀಲಿಕೈಯನ್ನು ಹನುಮ ಗಿರಿಮೇಳದ ಕಲಾವಿದ ಶ್ರೀ ರೂಪೇಶ್ ಆಚಾರ್ಯ ಅವರಿಗೆ ಭಾನುವಾರ ಹಸ್ತಾಂತರ ಮಾಡಲಾಯಿತು.ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಹಾಗೂ ನೂತನ ಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿಗಳಾದ ಅಶೋಕ್ ಶೆಟ್ಟಿ ಬೆಳ್ಳಾಡಿ ಅವರು ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಿ ಶುಭಹಾರೈಸಿದರು.ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಿಕೆ ಹಾಗೂ ಪದಾಧಿಕಾರಿಗಳಾದ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.
ಬಡವರ ಕಣ್ಣೀರೊರಸಲು ಹೃದಯಪೂರ್ವಕವಾಗಿ ಸಹಕರಿಸಿದ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ದಾನಿಗಳಾದ ಶ್ರೀ ಅಶೋಕ್ ಶೆಟ್ಟಿ ಬೆಳ್ಳಾಡಿ ಹಾಗೂ ಶ್ಯಾಮಲಾ ಅಶೋಕ್ ಶೆಟ್ಟಿ ಅವರನ್ನು ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ವತಿಯಿಂದ ರೂಪೇಶ್ ಆಚಾರ್ಯ ಅವರು ಮತ್ತು ಮನೆಯವರನ್ನು ಗೌರವಿಸಲಾಯಿತು.ಈ ಸಂದರ್ಭ ವಿಟ್ಲ ಘಟಕದ ಪದಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.