ಮಂಗಳೂರು:ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದೆ.ಹೆಜ್ಜೇನು ದಾಳಿಯಿಂದ ಕಂಗಾಲಾದ ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.ಭಾನುವಾರ ಒಂಬತ್ತುಕೆರೆಯ అనిల ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಆಟಗಾರರೊಬ್ಬರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ತಾಗಿದೆ.ಪರಿಣಾಮ ಕ್ರಿಕೆಟ್ ಮೈದಾನಕ್ಕೆ ದಾಳಿ ಇಟ್ಟ ಹೆಜ್ಜೇನು ನೊಣಗಳು ಆಟಗಾರರ ಮೇಲೆ ದಾಳಿ ಮಾಡಿದೆ.ಹೆಜ್ಜೇನು ದಾಳಿಯಿಂದ ರಕ್ಷಿಸಿಕೊಳ್ಳಲು ಯುವಕರು ಅವರು ಮೈದಾನವಿಡೀ ಓಡಾಡಿದ್ದಾರೆ.ಅಸಂಖ್ಯ ಸಂಖ್ಯೆ ಯಲ್ಲಿ ಕಾಣಿಸಿಕೊಂಡ ಹೆಜ್ಜೇನು ಹುಳುಗಳು ಮೈದಾನ ಸೂತ್ತಲು ಆವರಿಸಿ ಅಲ್ಲಿದ್ದವರ ಮೇಲೆ ದಾಳಿ ನಡೆಸಿದೆ,ಈ ಕಾರಣದಿಂದ ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…