ಕುಂದಾಪುರ

ನಾಗಬನದ ನಾಗಪ್ಪನ ಮಹಿಮೆ ಧ್ವನಿ ಸುರುಳಿ ಬಿಡುಗಡೆ,ಪತ್ರಿಭಾ ಪುರಸ್ಕಾರ ವಿತರಣೆ

Share

ಕುಂದಾಪುರ:ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಹೊಸಾಡು ಗ್ರಾಮದ ಅರಾಟೆ ಒಳನಾಡು ಶ್ರೀಸ್ವಾಮಿಲಿಂಗ ಮತ್ತು ಸಪರಿವಾರ ದೈವಗಳ ಮಹಿಮೆ ಕುರಿತು ಸದಾಶಿವ ಎನ್ ಮೊಗವೀರ ಅವರ ರಚನೆಯಲ್ಲಿ ಮೂಡಿ ಬಂದಿರುವ ನಾಗಬನದ ನಾಗಪ್ಪನ ಮಹಿಮೆ ಮಹಿಮೆ ಎಂಬ ವಿಶೇಷವಾದ ಧ್ವನಿ ಸುರುಳಿಯನ್ನು ದೈವಸ್ಥಾನದ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅದ್ಧೂರಿಯಾಗಿ ಮಂಗಳವಾರ ಬಿಡುಗಡೆ ಮಾಡಲಾಯಿತು.ಶ್ರೀ ಸ್ವಾಮಿಲಿಂಗ ಮತ್ತು ಪರಿವಾರ ದೈವಸ್ಥಾನದ ವಾರ್ಷಿಕ ಉತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ನೃತ್ಯ ವೈಭವ,ಸಂಗೀತ ರಸಮಂಜರಿ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಆನಂದ ಮೊಗವೀರ ಮಾತನಾಡಿ,ನೂರಾರು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಿರಿ ಸಿಂಗಾರ ಕೋಲ ಸೇವೆಯನ್ನು ಊರಿನವರ ಸಹಕಾರ ಮತ್ತು ದೈವವನ್ನು ನಂಬಿದ ಕುಟುಂಬಸ್ಥರ ಸಹಕಾರದಿಂದ ಆಚರಿಸಿಕೊಂಡು ಬರಲಾಗುತ್ತಿದೆ.ಯುವ ಪ್ರತಿಭೆ ಸದಾಶಿವ ಮೊಗವೀರ ಅವರು ರಚಿಸಿರುವ ನಾಗಬನದ ನಾಗಪ್ಪನ ಮಹಿಮೆ ಎಂಬ ಧ್ವನಿ ಸುರಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು ಅದ್ಭುತವಾಗಿ ಮೂಡಿ ಬಂದಿದೆ.ಸಂಗೀತ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತಹ ಭಾಗ್ಯವನ್ನು ದೇವರು ಅವರಿಗೆ ಕುರುಣಿಸಲಿ ಎಂದು ಹಾರೈಸಿದರು.

ನಾಗಬನದ ನಾಗಪ್ಪನ ಮಹಿಮೆ ಕುರಿತು ಸಂಗೀತವನ್ನು ರಚನೆ ಮಾಡಿರುವ ಸದಾಶಿವ ಮೊಗವೀರ ಮಾತನಾಡಿ,ಸ್ವಾಮಿಲಿಂಗ ಎನ್ನುವ ಹಾಡನ್ನು ಮೊದಲ ಬಾರಿಗೆ ರಚನೆ ಮಾಡಲಾಗಿದ್ದು ದೇವರ ಕೃಪೆಯಿಂದ ಎರಡನೇ ಬಾರಿಗೆ ಶೂಲದ ಹೈಗುಳಿ ಎನ್ನುವ ಸಂಗೀತವನ್ನು ರಚನೆ ಮಾಡಿದ್ದೇನೆ ಈ ಹಿಂದೆ ರಚಿಸಿರುವ ಎರಡು ಧ್ವನಿ ಸುರುಳಿಗಳು ಯಶಸ್ವಿಯಾಗಿ ಮೂಡಿ ಬಂದಿದೆ ಎಲ್ಲರ ಸಹಕಾರದಿಂದ ಮೂರನೇ ಧ್ವನಿ ಸುರುಳಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು ಎಲ್ಲರೂ ಪ್ರೋತ್ಸಾಹ ನೀಡಬೇಕೆಂದು ಕೇಳಿಕೊಂಡರು.

ಸದಾಶಿವ ಮೊಗವೀರ ಅವರು ರಚಿಸಿರುವ ನಾಗಬನದ ನಾಗಪ್ಪನ ಮಹಿಮೆ ಧ್ವನಿ ಸುರುಳಿಯನ್ನು ಮಂಜುನಾಥ್ ನಾಯ್ಕ್ ಅವರು ಬಿಡುಗಡೆಗೊಳಿಸಿದರು.ಸದಾಶಿವ ಮೊಗವೀರ ಅವರ ಸಾಹಿತ್ಯದಲ್ಲಿ ಮೂಡಿ ಬಂದಿರುವ 3ನೇ ಧ್ವನಿ ಸುರುಳಿಯಾಗಿದೆ.ಈ ಸಂದರ್ಭದಲ್ಲಿ ಸಂಗೀತ ರಚನೆಗೆ ಸಹಕರಿಸಿದ ಮಹೇಂದ್ರ ಗೌಡ,ಬಾಲು ಮಾಸ್ಟರ್ ಹಾಗೂ ಸದಾಶಿವ ಮೊಗವೀರ ಅವರನ್ನು ದೈವಸ್ಥಾನದ ಮೊಕ್ತೇಸರರಾದ ಕೃಷ್ಣ ಚೆಂದನ್ ಅವರು ಸನ್ಮಾನಿಸಿದರು.ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಾದ ವೈಷ್ಣವಿ,ಯಶೋಧರ,ನವ್ಯಶ್ರೀ ಹಾಗೂ ಸೈನಿಕ ಶ್ರೀನಾಥ್ ನಾಯ್ಕ್ ಅವರನ್ನು ಗೌರವಿಸಲಾಯಿತು.ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕೃಷ್ಣ ಚೆಂದನ್ ಅಧ್ಯಕ್ಷತೆ ವಹಿಸಿದ್ದರು,ಈ ಸಮಯದಲ್ಲಿ ಗಣೇಶ ಚೆಂದನ್,ಆನಂದ ನಾಯ್ಕ್,ಭಾಸ್ಕರ ಎಂ ನಾಯ್ಕ್,ನರಸಿಂಹ ನಾಯ್ಕ್,ಸುರೇಶ ಪಾತ್ರಿ,ನಾಗರಾಜ ಪಾಣನರ,ಪ್ರಶಾಂತ ನಾಯ್ಕ್,ಗುರುರಾಜ್,ಶಿವರಾಜ್,ಯೋಗೀಶ್,ಜಗದೀಶ,ಮಂಜುನಾಥ ನಾಯ್ಕ್ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago