ಕುಂದಾಪುರ

ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು ಶೂಲದ ಹಾೈಗುಳಿ ಪರಿವಾರ ದೈವಗಳ ಸಿರಿ ಸಿಂಗಾರ ಕೋಲ,ವಾರ್ಷಿಕ ಮಹೋತ್ಸವ ಆಚರಣೆ

Share

Advertisement
Advertisement

ಕುಂದಾಪುರ:ಹೊಸಾಡು ಗ್ರಾಮದ ಮಂಕಿ-ಒಳನಾಡು
ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು ಶೂಲದ ಹಾೈಗುಳಿ ಹಾಗೂ ಸಪರಿವಾರ ದೇವರ ಸಿರಿ ಸಿಂಗಾರ ಕೋಲ ಮತ್ತು ವಾರ್ಷಿಕ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಶ್ರೀ ದೇವರ ಸಿರಿ ಸಿಂಗಾರ ಕೋಲ ಮತ್ತು ವಾರ್ಷಿಕ ಮಹೋತ್ಸವ ಅಂಗವಾಗಿ ಶ್ರೀ ಶ್ರೀ ನಾಗ ಪೂಜೆ,ಮಹಾ ಮಂಗಳಾರತಿ,ನೇಮೋತ್ಸವ, ಪ್ರಸಾದ ವಿತರಣೆ,ಅನ್ನದಾನ ಸೇವೆ ಜರುಗಿತು.

Advertisement

ದೇವಸ್ಥಾನದ ಮೊಕ್ತೇಸರರಾದ ಕೃಷ್ಣ ಚೆಂದನ್ ಮಾತನಾಡಿ,ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಕೋಲ ನೇಮೋತ್ಸವವನ್ನು ಸಂಪ್ರದಾಯ ಬದ್ಧವಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಅರ್ಜಿಣ ಅವಸ್ಥೆಯಲ್ಲಿದ್ದ ದೈವಸ್ಥಾನವನ್ನು ಕಳೆದ ಆರು ವರ್ಷಗಳ ಹಿಂದೆ ಜೀರ್ಣೋದ್ಧಾರ ಕಾರ್ಯವನ್ನು ಮಾಡಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ವಾಳ್ತೂರು ನಾಗರಾಜ ಪಾಣನರ ಮಾತನಾಡಿ,ದೇವರಾಧನೆ ಭೂತಾರಾಧನೆ,ನಾಗಾರಾಧನೆ ಎನ್ನುವುದು ಕರಾವಳಿ ಭಾಗದ ಜನರ ಜೀವನ ಕೊಂಡಿಯಾಗಿದೆ.ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿರುವ ಕೋಲ ನೇಮೋತ್ಸ ಇರಲಿ ಇನ್ನಾವುದೇ ಆಚರಣೆ ಆಗಲಿ ಇನ್ನೂ ಚಾಲ್ತಿಯಲ್ಲಿರುವುದೇ ಇದಕ್ಕೆ ಸಾಕ್ಷಿಆಗಿದೆ ಎಂದು ಹೇಳಿದರು.

ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು,ಶೂಲದ ಹಾೈಗುಳಿ,ಮುಡುರ ಹಾೈಗುಳಿ, ನಾಗಪಾದ ಹಾೈಗುಳಿ, ಜೈನ ಹಾೈಗುಳಿ,ಕೆಂಡ ಹಾೈಗುಳಿಸೇರಿದಂತೆ ಸಪರಿವಾರ ದೈವಗಳ ವಾರ್ಷಿಕ ಸಿರಿ ಸಿಂಗಾರ ಕೋಲ ಕಟ್ಟುಕಟಲೇ ಯಂತೆ ನಡೆಯಿತು.ಭಕ್ತರು ದೈವಗಳಿಗೆ ಹರಕೆಯನ್ನು ಸಲ್ಲಿಸಿದರು.ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಅರ್ಚಕ ವೃಂದ, ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಶ್ರೀ ನಾಗಬನ ,ಶ್ರೀ ಸ್ವಾಮಿಲಿಂಗ ಸಪರಿವಾರ ದೈವಸ್ಥಾನ ಸಮಿತಿ ಸರ್ವ ಸದಸ್ಯರು ,ಗ್ರಾಮಸ್ಥರು ಉಪಸ್ಥಿತರಿದ್ದರು

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

6 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

6 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

8 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

11 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

3 days ago