ಕುಂದಾಪುರ

ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು ಶೂಲದ ಹಾೈಗುಳಿ ಪರಿವಾರ ದೈವಗಳ ಸಿರಿ ಸಿಂಗಾರ ಕೋಲ,ವಾರ್ಷಿಕ ಮಹೋತ್ಸವ ಆಚರಣೆ

Share

Advertisement
Advertisement
Advertisement

ಕುಂದಾಪುರ:ಹೊಸಾಡು ಗ್ರಾಮದ ಮಂಕಿ-ಒಳನಾಡು
ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು ಶೂಲದ ಹಾೈಗುಳಿ ಹಾಗೂ ಸಪರಿವಾರ ದೇವರ ಸಿರಿ ಸಿಂಗಾರ ಕೋಲ ಮತ್ತು ವಾರ್ಷಿಕ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಶ್ರೀ ದೇವರ ಸಿರಿ ಸಿಂಗಾರ ಕೋಲ ಮತ್ತು ವಾರ್ಷಿಕ ಮಹೋತ್ಸವ ಅಂಗವಾಗಿ ಶ್ರೀ ಶ್ರೀ ನಾಗ ಪೂಜೆ,ಮಹಾ ಮಂಗಳಾರತಿ,ನೇಮೋತ್ಸವ, ಪ್ರಸಾದ ವಿತರಣೆ,ಅನ್ನದಾನ ಸೇವೆ ಜರುಗಿತು.

Advertisement

ದೇವಸ್ಥಾನದ ಮೊಕ್ತೇಸರರಾದ ಕೃಷ್ಣ ಚೆಂದನ್ ಮಾತನಾಡಿ,ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಕೋಲ ನೇಮೋತ್ಸವವನ್ನು ಸಂಪ್ರದಾಯ ಬದ್ಧವಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಅರ್ಜಿಣ ಅವಸ್ಥೆಯಲ್ಲಿದ್ದ ದೈವಸ್ಥಾನವನ್ನು ಕಳೆದ ಆರು ವರ್ಷಗಳ ಹಿಂದೆ ಜೀರ್ಣೋದ್ಧಾರ ಕಾರ್ಯವನ್ನು ಮಾಡಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ವಾಳ್ತೂರು ನಾಗರಾಜ ಪಾಣನರ ಮಾತನಾಡಿ,ದೇವರಾಧನೆ ಭೂತಾರಾಧನೆ,ನಾಗಾರಾಧನೆ ಎನ್ನುವುದು ಕರಾವಳಿ ಭಾಗದ ಜನರ ಜೀವನ ಕೊಂಡಿಯಾಗಿದೆ.ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿರುವ ಕೋಲ ನೇಮೋತ್ಸ ಇರಲಿ ಇನ್ನಾವುದೇ ಆಚರಣೆ ಆಗಲಿ ಇನ್ನೂ ಚಾಲ್ತಿಯಲ್ಲಿರುವುದೇ ಇದಕ್ಕೆ ಸಾಕ್ಷಿಆಗಿದೆ ಎಂದು ಹೇಳಿದರು.

ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು,ಶೂಲದ ಹಾೈಗುಳಿ,ಮುಡುರ ಹಾೈಗುಳಿ, ನಾಗಪಾದ ಹಾೈಗುಳಿ, ಜೈನ ಹಾೈಗುಳಿ,ಕೆಂಡ ಹಾೈಗುಳಿಸೇರಿದಂತೆ ಸಪರಿವಾರ ದೈವಗಳ ವಾರ್ಷಿಕ ಸಿರಿ ಸಿಂಗಾರ ಕೋಲ ಕಟ್ಟುಕಟಲೇ ಯಂತೆ ನಡೆಯಿತು.ಭಕ್ತರು ದೈವಗಳಿಗೆ ಹರಕೆಯನ್ನು ಸಲ್ಲಿಸಿದರು.ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಅರ್ಚಕ ವೃಂದ, ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಶ್ರೀ ನಾಗಬನ ,ಶ್ರೀ ಸ್ವಾಮಿಲಿಂಗ ಸಪರಿವಾರ ದೈವಸ್ಥಾನ ಸಮಿತಿ ಸರ್ವ ಸದಸ್ಯರು ,ಗ್ರಾಮಸ್ಥರು ಉಪಸ್ಥಿತರಿದ್ದರು

Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago