ಕುಂದಾಪುರ

ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು ಶೂಲದ ಹಾೈಗುಳಿ ಪರಿವಾರ ದೈವಗಳ ಸಿರಿ ಸಿಂಗಾರ ಕೋಲ,ವಾರ್ಷಿಕ ಮಹೋತ್ಸವ ಆಚರಣೆ

Share

ಕುಂದಾಪುರ:ಹೊಸಾಡು ಗ್ರಾಮದ ಮಂಕಿ-ಒಳನಾಡು
ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು ಶೂಲದ ಹಾೈಗುಳಿ ಹಾಗೂ ಸಪರಿವಾರ ದೇವರ ಸಿರಿ ಸಿಂಗಾರ ಕೋಲ ಮತ್ತು ವಾರ್ಷಿಕ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಶ್ರೀ ದೇವರ ಸಿರಿ ಸಿಂಗಾರ ಕೋಲ ಮತ್ತು ವಾರ್ಷಿಕ ಮಹೋತ್ಸವ ಅಂಗವಾಗಿ ಶ್ರೀ ಶ್ರೀ ನಾಗ ಪೂಜೆ,ಮಹಾ ಮಂಗಳಾರತಿ,ನೇಮೋತ್ಸವ, ಪ್ರಸಾದ ವಿತರಣೆ,ಅನ್ನದಾನ ಸೇವೆ ಜರುಗಿತು.

ದೇವಸ್ಥಾನದ ಮೊಕ್ತೇಸರರಾದ ಕೃಷ್ಣ ಚೆಂದನ್ ಮಾತನಾಡಿ,ಹಿಂದಿನ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವ ಕೋಲ ನೇಮೋತ್ಸವವನ್ನು ಸಂಪ್ರದಾಯ ಬದ್ಧವಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಅರ್ಜಿಣ ಅವಸ್ಥೆಯಲ್ಲಿದ್ದ ದೈವಸ್ಥಾನವನ್ನು ಕಳೆದ ಆರು ವರ್ಷಗಳ ಹಿಂದೆ ಜೀರ್ಣೋದ್ಧಾರ ಕಾರ್ಯವನ್ನು ಮಾಡಲಾಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ವಾಳ್ತೂರು ನಾಗರಾಜ ಪಾಣನರ ಮಾತನಾಡಿ,ದೇವರಾಧನೆ ಭೂತಾರಾಧನೆ,ನಾಗಾರಾಧನೆ ಎನ್ನುವುದು ಕರಾವಳಿ ಭಾಗದ ಜನರ ಜೀವನ ಕೊಂಡಿಯಾಗಿದೆ.ಅನಾದಿ ಕಾಲದಿಂದಲೂ ನಡೆದು ಕೊಂಡು ಬರುತ್ತಿರುವ ಕೋಲ ನೇಮೋತ್ಸ ಇರಲಿ ಇನ್ನಾವುದೇ ಆಚರಣೆ ಆಗಲಿ ಇನ್ನೂ ಚಾಲ್ತಿಯಲ್ಲಿರುವುದೇ ಇದಕ್ಕೆ ಸಾಕ್ಷಿಆಗಿದೆ ಎಂದು ಹೇಳಿದರು.

ಶ್ರೀ ಸ್ವಾಮಿಲಿಂಗ ಮರ್ಲುಚಿಕ್ಕು,ಶೂಲದ ಹಾೈಗುಳಿ,ಮುಡುರ ಹಾೈಗುಳಿ, ನಾಗಪಾದ ಹಾೈಗುಳಿ, ಜೈನ ಹಾೈಗುಳಿ,ಕೆಂಡ ಹಾೈಗುಳಿಸೇರಿದಂತೆ ಸಪರಿವಾರ ದೈವಗಳ ವಾರ್ಷಿಕ ಸಿರಿ ಸಿಂಗಾರ ಕೋಲ ಕಟ್ಟುಕಟಲೇ ಯಂತೆ ನಡೆಯಿತು.ಭಕ್ತರು ದೈವಗಳಿಗೆ ಹರಕೆಯನ್ನು ಸಲ್ಲಿಸಿದರು.ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಅರ್ಚಕ ವೃಂದ, ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಶ್ರೀ ನಾಗಬನ ,ಶ್ರೀ ಸ್ವಾಮಿಲಿಂಗ ಸಪರಿವಾರ ದೈವಸ್ಥಾನ ಸಮಿತಿ ಸರ್ವ ಸದಸ್ಯರು ,ಗ್ರಾಮಸ್ಥರು ಉಪಸ್ಥಿತರಿದ್ದರು

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago