ಉಡುಪಿ:ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು,ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು.ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ,ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು.ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು.
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಕೈಮಗ್ಗ ತಯಾರಿಕಾ ಘಟಕಕ್ಕೆ ಭೇಟಿ ನೀಡಿದರು.ಉಡುಪಿ ಬ್ರಹ್ಮಗಿರಿ…
ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ…
ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ…
(ಪಂಜುರ್ಲಿ) ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ…