ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ,ಕೋಟ್ಯಂತರ ಮೌಲ್ಯದ ಚಿನ್ನಾಭರಣ ಕಳವು

Share

Advertisement
Advertisement
Advertisement

ಮಂಗಳೂರು:ಸಮೀಪದ ಅಡ್ಯನಡ್ಕದಲ್ಲಿ‌ ನಡೆದಿದೆ.ಸುಮಾರು 2 ರಿಂದ 3 ಕೋಟಿ ರೂ. ನಗದು ಮತ್ತು ಬಂಗಾರ ಕಳ್ಳರ ಪಾಲಾಗಿದೆ.ಬುಧವಾರ ರಾತ್ರಿ 2.30 ರಿಂದ ಬೆಳಗ್ಗಿನ ಜಾವ 4 ಗಂಟೆಯಸುಮಾರಿಗೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು,ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ.ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್‌ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page