ಕುಂದಾಪುರ

ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಶ್ರೀಮನಹ್ಮಾ ಬ್ರಹ್ಮರಥೋತ್ಸವ

Share

Advertisement
Advertisement

ಕುಂದಾಪುರ:ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಬೈಂದೂರು ತಾಲೂಕಿನ ಪ್ರಸಿದ್ಧ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀಮನಹ್ಮಾ ಬ್ರಹ್ಮರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ಹಬ್ಬದ ಪ್ರಯುಕ್ತ ವಿಶೇಷ ಕಟ್ಟೆ ಪೂಜೆ ಹಾಗೂ ಪ್ರತಿ ಮನೆಯಲ್ಲಿ ದೀಪಾಲಂಕಾರ ರಂಗೋಲಿ ಹಾಕಿ ದೇವರನ್ನು ಬರಮಾಡಿಕೊಳ್ಳುತ್ತಾರೆ.ಕಟ್ಟಿ ಪೂಜೆ ಇಲ್ಲಿನ ವಿಶೇಷ ಆಕರ್ಷಣೆ ಬಿಂದುವಾಗಿದೆ.
ಶ್ರೀ ಲಕ್ಷ್ಮೀ ಜನಾರ್ದನ ದೇವರ ರಥೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ಅಲಂಕಾರ ಪೂಜೆ,ಹಣ್ಣುಕಾಯಿ,ವಿಶೇಷ ಪೂಜೆ ಸಮರ್ಪಣೆ,ಮಂಗಳಾರತಿ ಸೇವೆ,ತುಲಭಾ,ಪಂಚಕಜ್ಜಾಯ ನೈವೇದ್ಯ,ಚೂರ್ಣೋತ್ಸವ, ಮತ್ತು ಅನ್ನ ಸಂತರ್ಪಣೆ ಸೇವೆ ನಡೆಯಿತು.ರಾಜಾರಾಮ ಸೋಮಾಯಾಜೀ ಮತ್ತು ಊರಿನ ಪುರೋಹಿತರು ಜೊತೆಗೂಡಿ ಧಾರ್ಮಿಕ ಕ್ರಾಯಕ್ರಮಗಳನ್ನು ನಡೆಸಿಕೊಟ್ಟರು.ಹರಕೆ ರೂಪದಲ್ಲಿ ಕರ್ಪೂರವನ್ನು ದೇವರಿಗೆ ಸಲ್ಲಿಸುವುದು ಇಲ್ಲಿನ ವಿಶೇಷತೆ ಆಗಿದೆ.
ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕರ್ಪೂರ ಸೇವೆ ನಡೆಯುವ ದೇವಸ್ಥಾನವಾಗಿದೆ.ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ,ಸರ್ವ ಸದಸ್ಯರು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago