ಕುಂದಾಪುರ:ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಬೈಂದೂರು ತಾಲೂಕಿನ ಪ್ರಸಿದ್ಧ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಶ್ರೀಮನಹ್ಮಾ ಬ್ರಹ್ಮರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ಹಬ್ಬದ ಪ್ರಯುಕ್ತ ವಿಶೇಷ ಕಟ್ಟೆ ಪೂಜೆ ಹಾಗೂ ಪ್ರತಿ ಮನೆಯಲ್ಲಿ ದೀಪಾಲಂಕಾರ ರಂಗೋಲಿ ಹಾಕಿ ದೇವರನ್ನು ಬರಮಾಡಿಕೊಳ್ಳುತ್ತಾರೆ.ಕಟ್ಟಿ ಪೂಜೆ ಇಲ್ಲಿನ ವಿಶೇಷ ಆಕರ್ಷಣೆ ಬಿಂದುವಾಗಿದೆ.
ಶ್ರೀ ಲಕ್ಷ್ಮೀ ಜನಾರ್ದನ ದೇವರ ರಥೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವರಿಗೆ ಅಲಂಕಾರ ಪೂಜೆ,ಹಣ್ಣುಕಾಯಿ,ವಿಶೇಷ ಪೂಜೆ ಸಮರ್ಪಣೆ,ಮಂಗಳಾರತಿ ಸೇವೆ,ತುಲಭಾ,ಪಂಚಕಜ್ಜಾಯ ನೈವೇದ್ಯ,ಚೂರ್ಣೋತ್ಸವ, ಮತ್ತು ಅನ್ನ ಸಂತರ್ಪಣೆ ಸೇವೆ ನಡೆಯಿತು.ರಾಜಾರಾಮ ಸೋಮಾಯಾಜೀ ಮತ್ತು ಊರಿನ ಪುರೋಹಿತರು ಜೊತೆಗೂಡಿ ಧಾರ್ಮಿಕ ಕ್ರಾಯಕ್ರಮಗಳನ್ನು ನಡೆಸಿಕೊಟ್ಟರು.ಹರಕೆ ರೂಪದಲ್ಲಿ ಕರ್ಪೂರವನ್ನು ದೇವರಿಗೆ ಸಲ್ಲಿಸುವುದು ಇಲ್ಲಿನ ವಿಶೇಷತೆ ಆಗಿದೆ.
ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕರ್ಪೂರ ಸೇವೆ ನಡೆಯುವ ದೇವಸ್ಥಾನವಾಗಿದೆ.ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿ,ಸರ್ವ ಸದಸ್ಯರು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…