ಕುಂದಾಪುರ

ಶ್ರೀರಾಮ ಭಜನಾ ಮಂಡಳಿ ಬಡಾಕೆರೆ 32ನೇ ವಾರ್ಷಿಕೋತ್ಸವ

Share

ಕುಂದಾಪುರ:ಹಿರಿಯರು ಮತ್ತು ಕಿರಿಯರ ಒಗ್ಗೂಡುವಿಕೆಯಿಂದ ಭಜನಾ ಮಂಡಳಿಯನ್ನು ಸ್ಥಾಪನೆಮಾಡಿಕೊಂಡು ನಿರಂತರವಾಗಿ ಭಜನಾ ಕೈಂಕರ್ಯದಲ್ಲಿ ತೊಡಗಿಕೊಳ್ಳುವುದರ ಜತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಮಾಡುವುದರ ಮೂಲಕ ಶ್ರೀರಾಮ ಭಜನಾ ಮಂಡಳಿ ಊರಿನ ಪ್ರಮುಖ ಶಕ್ತಿ ಕೇಂದ್ರವಾಗಿ ಕೆಲಸ ಮಾಡುತ್ತಿರುವುದು ಎಲ್ಲರಿಗೂ ಮಾದರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆದ ಶ್ರೀರಾಮ ಭಜನಾ ಮಂಡಳಿ ಬಡಾಕೆರೆ ಅದರ 32ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿತ್ಯವೂ ಮನೆಗಳಲ್ಲಿ ಭಜನೆ ಮಾಡುವುದರಿಂದ ಮನಸುಗಳು ಜೋಡಣೆಯಾಗಿ ಕುಟುಂಬದಲ್ಲಿ ಒಳ್ಳೆ ರೀತಿಯ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಸಹಕಾರಿಯಾಗುತ್ತದೆ ಎಂದರು.
ವೇ.ಮೂ ಲಕ್ಷ್ಮೀಶ ಅಡಿಗ ಬಡಾಕೆರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದೇವರನ್ನು ಭಜಿಸಲು ಭಜನೆ ಪ್ರಮುಖವಾದ ಮಾರ್ಗವಾಗಿದೆ ಭಜನೆ ಮಾಡುವುದರಿಂದ ಮನಸ್ಸಿನ ಭಾವನೆಗಳನ್ನು ಸುಲಭದಲ್ಲಿ ಹಿಡಿದಿಟ್ಟುಕೊಳ್ಳಬಹುದು ಧಾರ್ಮಿಕ ಪ್ರಜ್ಞೆಯಿಂದ ಬಾಳುದರಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ ಎಂದು ಹೇಳಿದರು.
ಗ್ರಾಮದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬೇಕು ಎನ್ನುವ ಉದ್ದೇಶದೊಂದಿಗೆ ಆರಂಭಗೊಂಡ ಭಜನಾ ಮಂಡಳಿ ಇಂದು ಊರಿನ ಅಂಗವಾಗಿ ಬೆಳೆದು ಬಂದಿದೆ.ತ್ಯಾಗದ ಮನೋಭಾವ ಇದ್ದಾಗ ಮಾತ್ರ ಸಂಘಟನೆಗಳು ಬೆಳೆಯಲು ಸಾಧ್ಯವಿದೆ ಎಂದರು.
ನಾಡ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಮೊಗವೀರ ಅಧ್ಯಕ್ಷತೆ ವಹಿಸಿದ್ದರು,ಶ್ರೀರಾಮ ಭಜನಾ ಮಂಡಳಿ ಬಡಾಕೆರೆ ಅಧ್ಯಕ್ಷ ಮಹೇಶ ಆಚಾರ್ಯ,ಸಾಹಿತಿ ಶ್ರೀನಿವಾಸ ಶೆಟ್ಟಿ,ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇವಸ್ಥಾನದ ಮೊಕ್ತೇಸರರಾದ ಪ್ರಕಾಶ ಐತಾಳ,ಅಮರ ದೀಪ್,ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನ ಬಡಾಕೆರೆ ಮೊಕ್ತೇಸರರಾದ ನರಸಿಂಹ ಅಡಿಗ,ಗಣೇಶೋತ್ಸವ ಸಮಿತಿ ಅಧ್ಯಕ್ಷ ಗಣೇಶ್ ನಾಯ್ಕ್ ಉಪಸ್ಥಿತರಿದ್ದರು.

ಸಮಾಜ ಸೇವಕರಾದ ಕೃಷ್ಣ ನಾಯ್ಕ್ ಮತ್ತು ರಮೇಶ್ ದೇವಾಡಿಗ ವಂಡ್ಸೆ ಅವರನ್ನು ಸನ್ಮಾನಿಸಲಾಯಿತು.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಿಸಲಾಯಿತು.ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ನಾಗೇಶ್ ಶೇಟ್ ಸ್ವಾಗತಿಸಿದರು.ವಿಕ್ರಮ್ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಹೇಶ್ ಶೇಟ್ ನಿರೂಪಿಸಿ,ವಂದಿಸಿದರು.ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ನಾಟಕ ಪ್ರದರ್ಶನ ಜರುಗಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago