ಮಂಗಳೂರು:ಖಾಸಗಿ ಟಿವಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ ಬಗ್ಗೆ ದೃಶ್ಯಾವಳಿಯನ್ನು ಬಳಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದ್ದು,ಕರಾವಳಿ ಭಾಗದ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ ಬಗ್ಗೆ ಹಾಗೂ ಧಾರಾವಾಹಿ ತಂಡ ಮತ್ತು ಡೈರೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್ ಪ್ರೀತಮ್ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ.ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿರುವುದು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ಧಾರಾವಾಹಿಯಲ್ಲಿ ದೈವಕೋಲ ಮಾಡಿರುವುದಕ್ಕೆ ತುಳುನಾಡ ದೈವಾರಾಧಕರು ಗರಂ ಆಗಿದ್ದಾರೆ.ಭೂತಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಖಾಸಗಿ ವಾಹಿನಿಯ ಧಾರಾವಾಹಿಯ ಪ್ರೋಮೋ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನಿಗೆ ಸಾಮಾಜಿಕ ಜಾಲತಾಣದಲ್ಲೂ ಕ್ಲಾಸ್ ತೆಗೆದುಕೊಳ್ಳಲಾಗಿದೆ.ವಿಡಿಯೋ ವೈರಲ್ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಧಾರವಾಹಿ ತೆರೆ ಮೇಲೆ ಬರಬಾರದೆಂದು ಪಟ್ಟು ಹಿಡಿದಿರುವ ತುಳುನಾಡ ದೈವಾರಾಧೆ ಸಂರಕ್ಷಣಾ ಯುವ ವೇದಿಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…