ಕುಂದಾಪುರ:ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕೆ ದಾರಿಯಾಗಲು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024 ರಲ್ಲಿ ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುದರ ಮೂಲಕ ಸಂಸ್ಥೆಗೆ ಕಿರ್ತಿ ತಂದಿದ್ದಾರೆ.ಸಂಸ್ಥೆಯಲ್ಲಿ ಜೆಇಇ ತರಬೇತಿ ಪಡೆದ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಈಶಾ ಶೆಟ್ಟಿ 98.63, ಚಿರಾಗ್ ವಿನಾಯಕ ಮಹಲೆ 97.66, ಎಂ. ಸೃಜನ್ 95.82, ಗೌರವ್ 95.64, ನಿಶಾ 94.50, ನಾಗರಾಜ್ ಸಿದ್ಧಪ್ಪಾ ಉಪ್ಪಾರ್ 94.35, ಸನ್ಮಾನ್ 94.11, ವರುಣ್ ಕೆ ಪಿ 92.58, ಸಮರೇಶ್ 92.40, ರೋಹಿತ್ ಆರ್ ಪೂಜಾರಿ 91.28, ಧನುಷ್ 91.23, ಶಶಾಂಕ್ ಶೆಟ್ಟಿ 91.11, ಪ್ರೀತಮ್ ಶೆಟ್ಟಿ 90.73, ನಿರ್ಮಿತಾ ಎನ್. ಡಿ 90.61, ಅನಿರುದ್ಧ್ ಎಸ್ ಹತ್ವಾರ್ 90.54, ವಿನುತಾ 90.46 ಶೇಕಡಾ ಅಂಕಗಳನ್ನು ಗಳಿಸಿ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ.ಎಕ್ಸಲೆಂಟ್ ಕುಂದಾಪುರ ಸಂಸ್ಥೆಯಲ್ಲಿ ಸರ್ಧಾತ್ಮಕ ಪರೀಕ್ಷೆಗಳಾದ ಜೆಇಇ/ನೀಟ್ ಪರೀಕ್ಷೆಗೆ ದೇಶದ ನಾನಾ ಭಾಗಗಳಿಂದ ತರಬೇತುದಾರರು ಆಗಮಿಸಿ ತರಬೇತಿ ನೀಡುವುದರಲ್ಲಿ ಅನುಭವಿ ಭೋಧಕ ಸಿಬ್ಬಂದಿ ವರ್ಗದವರು ಪ್ರತಿ ದಿನ ವಿದ್ಯಾರ್ಥಿಗಳಿಗೆ ಜೆಇಇ/ನೀಟ್ ತರಬೇತಿ ನೀಡಿ ಅವರನ್ನು ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಿಗೆ ಸಿದ್ಧ ಗೊಳಿಸುವುದು ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗಿದೆ.
ಬೋಧಕ ಸಿಬ್ಬಂದಿ ವರ್ಗದವರಿಗೂ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಶ್ರೀ ಎಂ.ಮಹೇಶ್ ಹೆಗ್ಡೆ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರತಾಪ್ಚಂದ್ರ ಶೆಟ್ಟಿ ಹಾಗೂ ಖಜಾಂಚಿ ಶ್ರೀ ಭರತ್ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…