ಕುಂದಾಪುರ

ಜೆ.ಇ.ಇ ಮೈನ್ ಫಲಿತಾಂಶ ಎಕ್ಸಲೆಂಟ್ ಕುಂದಾಪುರ ವಿದ್ಯಾರ್ಥಿಗಳು ಶ್ರೇಷ್ಠ ಸಾಧನೆ

Share

ಕುಂದಾಪುರ:ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕೆ ದಾರಿಯಾಗಲು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜನವರಿ 2024 ರಲ್ಲಿ ನಡೆದ ಜೆಇಇ ಮೈನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುದರ ಮೂಲಕ ಸಂಸ್ಥೆಗೆ ಕಿರ್ತಿ ತಂದಿದ್ದಾರೆ.ಸಂಸ್ಥೆಯಲ್ಲಿ ಜೆಇಇ ತರಬೇತಿ ಪಡೆದ 20 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಈಶಾ ಶೆಟ್ಟಿ 98.63, ಚಿರಾಗ್ ವಿನಾಯಕ ಮಹಲೆ 97.66, ಎಂ. ಸೃಜನ್ 95.82, ಗೌರವ್ 95.64, ನಿಶಾ 94.50, ನಾಗರಾಜ್ ಸಿದ್ಧಪ್ಪಾ ಉಪ್ಪಾರ್ 94.35, ಸನ್‍ಮಾನ್ 94.11, ವರುಣ್ ಕೆ ಪಿ 92.58, ಸಮರೇಶ್ 92.40, ರೋಹಿತ್ ಆರ್ ಪೂಜಾರಿ 91.28, ಧನುಷ್ 91.23, ಶಶಾಂಕ್ ಶೆಟ್ಟಿ 91.11, ಪ್ರೀತಮ್ ಶೆಟ್ಟಿ 90.73, ನಿರ್ಮಿತಾ ಎನ್. ಡಿ 90.61, ಅನಿರುದ್ಧ್ ಎಸ್ ಹತ್‍ವಾರ್ 90.54, ವಿನುತಾ 90.46 ಶೇಕಡಾ ಅಂಕಗಳನ್ನು ಗಳಿಸಿ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ.ಎಕ್ಸಲೆಂಟ್ ಕುಂದಾಪುರ ಸಂಸ್ಥೆಯಲ್ಲಿ ಸರ್ಧಾತ್ಮಕ ಪರೀಕ್ಷೆಗಳಾದ ಜೆಇಇ/ನೀಟ್ ಪರೀಕ್ಷೆಗೆ ದೇಶದ ನಾನಾ ಭಾಗಗಳಿಂದ ತರಬೇತುದಾರರು ಆಗಮಿಸಿ ತರಬೇತಿ ನೀಡುವುದರಲ್ಲಿ ಅನುಭವಿ ಭೋಧಕ ಸಿಬ್ಬಂದಿ ವರ್ಗದವರು ಪ್ರತಿ ದಿನ ವಿದ್ಯಾರ್ಥಿಗಳಿಗೆ ಜೆಇಇ/ನೀಟ್ ತರಬೇತಿ ನೀಡಿ ಅವರನ್ನು ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಿಗೆ ಸಿದ್ಧ ಗೊಳಿಸುವುದು ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗಿದೆ.
ಬೋಧಕ ಸಿಬ್ಬಂದಿ ವರ್ಗದವರಿಗೂ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾಗಿರುವ ಶ್ರೀ ಎಂ.ಮಹೇಶ್ ಹೆಗ್ಡೆ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರತಾಪ್‍ಚಂದ್ರ ಶೆಟ್ಟಿ ಹಾಗೂ ಖಜಾಂಚಿ ಶ್ರೀ ಭರತ್ ಶೆಟ್ಟಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago