ಕುಂದಾಪುರ

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಿಸುವಂತೆ ಆಗ್ರಹ

Share

ಕುಂದಾಪುರ:ಸಬ್ಸಿಡಿ ರೂಪದಲ್ಲಿ ನೀಡುತ್ತಿರುವ ವೈಟ್ ಸೀಮೆಎಣ್ಣೆ ದುಬಾರಿಯಾಗಿದ್ದು ಮೀನುಗಾರರಿಗೆ ಹೊರೆಯಾಗಿ ಪರಿಣಮಿಸಿದೆ.ಮೀನುಗಾರರ ಮೇಲಿನ ಹಿತಾಶಕ್ತಿಯಿಂದ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕ್ಕುನ್ನುವುದು ಕರಾವಳಿ ಭಾಗದ ಮೀನುಗಾರರ ಆಗ್ರಹ.
ಯಾವುದೆ ರೀತಿ ಸೂಚನೆಯನ್ನು ನೀಡದ ಕೇಂದ್ರ ಸರಕಾರ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಇತ್ತೀಚೆಗೆ ತೆಗೆದು ಹಾಕಿದೆ.ಅತ್ಯಂತ ದಹನ ಶೀಲತೆಯನ್ನು ಹೊಂದಿರುವ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ತೆಗೆದು ಹಾಕಿರುವುದರಿಂದ ಬ್ಲೂ ಸೀಮೆಎಣ್ಣೆಯನ್ನು ಮಾರುಕಟ್ಟೆ ದರದಲ್ಲೆ ಖರೀದಿಸಬೇಕು.ಸಬ್ಸಿಡಿ ರೂಪದಲ್ಲಿ ವಿತರಿಸುತ್ತಿರುವ ವೈಟ್ ಸೀಮೆ ಎಣ್ಣೆ ಬ್ಲೂ ಸೀಮೆಎಣ್ಣೆ ಗಿಂತ 10.ರೂ ದುಬಾರಿ.
ಖನಿಜ ತೈಲದಿಂದ ಪಡೆಯಲಾಗುವ ಸೀಮೆ ಎಣ್ಣೆಯನ್ನು (ಹೈಡ್ರೊಕಾರ್ಬನ್ ದ್ರವ) ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಕೈಗಾರಿಕೆ ಜೊತೆಗೆ ಮನೆಗಳಲ್ಲಿ ಅಡುಗೆ ಮತ್ತು ದೀಪದ ಇಂಧನವಾಗಿ ಮಾತ್ರವಲ್ಲದೆ ಮೋಟರ್‍ಗಳ ಚಲನೆಗೆ ಪ್ರಮುಖ ಇಂಧನವನ್ನಾಗಿ ಬಳಸಲಾಗುತ್ತದೆ.ಗ್ರಹ ಬಳಕೆಗಾಗಿ ಹಾಗೂ ಮೀನುಗಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ರೇಷನ್ ಪದ್ಧತಿಯಲ್ಲಿ ಭಾರತ ಸರಕಾರ ಈ ಹಿಂದೆ ಸಬ್ಸಿಡಿ ರೂಪದಲ್ಲಿ ಬ್ಲೂ ಸೀಮೆಎಣ್ಣೆಯನ್ನು ಪೂರೈಕೆ ಮಾಡುತ್ತಿತ್ತು.
ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಳಕ್ಕೆ ಆಗ್ರಹ:ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ತೆಗೆದು ಹಾಕಿದ್ದರಿಂದ ಪ್ರಸ್ತುತ ರಾಜ್ಯ ಸರಕಾರ ಸಬ್ಸಿಡಿ ರೂಪದಲ್ಲಿ ವೈಟ್ ಸೀಮೆಎಣ್ಣೆಯನ್ನು ನೀಡುತ್ತಿದೆ.ಬ್ಲೂ ಸೀಮೆಎಣ್ಣೆ ಕ್ಕಿಂತ ವೈಟ್ ಸೀಮೆಎಣ್ಣೆ ದುಬಾರಿಯಾಗಿರುವುದರಿಂದ ಮೀನುಗಾರರಿಗೆ ಹೊರೆಯಾಗಿದೆ.ಅನಿವಾರ್ಯ ಕಾರಣದಿಂದ ಲೀಟರ್ ಮೇಲೆ ಹೆಚ್ಚುವರಿಯಾರಿ 10.ರೂ ನೀಡಿ ಕೊಂಡುಕೊಳ್ಳಬೇಕು.ಮೀನಿನ ಇಳುವರಿ ಕುಂಠಿತ,ಪ್ರತಿಕೂಲ ಹಾವಾಮಾನದಿಂದ ಕಂಗೆಟ್ಟಿರುವ ಮೀನುಗಾರರು ತೈಲ ದರದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.ಪ್ರಸ್ತುತ ನೀಡುತ್ತಿರುವ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕನಿಷ್ಠ 10.ರೂ ಏರಿಕೆ ಮಾಡುವಂತೆ ಮೀನುಗಾರರು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.ಹಿಂದೆ ರೇಷನ್ ವ್ಯವಸ್ಥೆಯಡಿಯಲ್ಲಿ ನೀಡುತ್ತಿದ್ದ ಬ್ಲೂ ಸೀಮೆಎಣ್ಣೆ ಕಡಿಮೆ ದರದಲ್ಲಿ ಮೀನುಗಾರರಿಗೆ ದೊರಕುತ್ತಿತ್ತು.
ಮೋಟರ್ ಇಂಜಿನ್ ಖರೀದಿಸಲು ಸಬ್ಸಿಡಿ ಹಣ ಘೋಷಣೆ:ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ತೆಗೆದು ಹಾಕಿದ ಬಳಿಕ ಕೇಂದ್ರ ಸರಕಾರ ಮೀನುಗಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಬಳಕೆ ಮಾಡುವಂತೆ ಉತ್ತೇಜಿಸಿ ವಿಶೇಷವಾದ ಯೋಜನೆಗಳನ್ನು ಘೋಷಿಸಿದೆ.ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್‍ಅನ್ನು ಖರೀದಿಸುವ ಫಲಾನುಭವಿ ಮೀನುಗಾರರಿಗೆ ಸರಕಾರ ಘೋಷಣೆ ಮಾಡಿರುವಂತೆ 50,000.ರೂ ಸಬ್ಟಿಡಿ ಹಣ ದೊರಕಲಿದೆ.ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಮೀನುಗಾರರು ಅರ್ಜಿಯನ್ನು ಹಾಕಬೇಕು.
ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಬಳಕೆ ಮೇಲೆ ನಿರಾಶಕ್ತಿ:ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಓಡಿಸಲು ಸರಿ ಸುಮಾರು 1 ಲೀಟರ್ ಪೆಟ್ರೋಲ್‍ಗೆ 300 ಮೀಲಿ ತೈಲ ಮಿಶ್ರಣ ಮಾಡಬೇಕು.ಲೀಟರ್ ಒಂದರ ಮೇಲಿನ ವೆಚ್ಚ ಅಂದಾಜು 162.ರೂ ತಗಲುತ್ತದೆ ಎಂದು ಮೀನುಗಾರರು ಹೇಳುತ್ತಾರೆ.ಪೆಟ್ರೋಲ್‍ಗೆ ಯಾವುದೇ ರೀತಿಯ ಸಬ್ಸಿಡಿ ಸರಕಾರ ನೀಡದೆ ಇರುವುದರಿಂದ ಇದು ಮೀನುಗಾರರಿಗೆ ಹೊರೆ ಆಗಲಿದೆ.ಇಂಜಿನ್ ಖರೀದಿಗೆ ಸರಕಾರ 50,000.ರೂ ಹಣ ನೀಡಿದ್ದರು.ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಖರೀದಿಗೆ ಮೀನುಗಾರರು ನಿರಾಶಕ್ತಿ ತೋರಿಸುತ್ತಿದ್ದಾರೆ.ಸೀಮೆಎಣ್ಣೆ ಮತ್ತು ಪೆಟ್ರೋಲ್ ದರ ಅಜಗಜಾಂತರ ವ್ಯತ್ಯಾಸವಿರುವುದೆ ಕಾರಣವಾಗಿದೆ.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago