ಕುಂದಾಪುರ

ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಿಸುವಂತೆ ಆಗ್ರಹ

Share

Advertisement
Advertisement

ಕುಂದಾಪುರ:ಸಬ್ಸಿಡಿ ರೂಪದಲ್ಲಿ ನೀಡುತ್ತಿರುವ ವೈಟ್ ಸೀಮೆಎಣ್ಣೆ ದುಬಾರಿಯಾಗಿದ್ದು ಮೀನುಗಾರರಿಗೆ ಹೊರೆಯಾಗಿ ಪರಿಣಮಿಸಿದೆ.ಮೀನುಗಾರರ ಮೇಲಿನ ಹಿತಾಶಕ್ತಿಯಿಂದ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕ್ಕುನ್ನುವುದು ಕರಾವಳಿ ಭಾಗದ ಮೀನುಗಾರರ ಆಗ್ರಹ.
ಯಾವುದೆ ರೀತಿ ಸೂಚನೆಯನ್ನು ನೀಡದ ಕೇಂದ್ರ ಸರಕಾರ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಇತ್ತೀಚೆಗೆ ತೆಗೆದು ಹಾಕಿದೆ.ಅತ್ಯಂತ ದಹನ ಶೀಲತೆಯನ್ನು ಹೊಂದಿರುವ ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ತೆಗೆದು ಹಾಕಿರುವುದರಿಂದ ಬ್ಲೂ ಸೀಮೆಎಣ್ಣೆಯನ್ನು ಮಾರುಕಟ್ಟೆ ದರದಲ್ಲೆ ಖರೀದಿಸಬೇಕು.ಸಬ್ಸಿಡಿ ರೂಪದಲ್ಲಿ ವಿತರಿಸುತ್ತಿರುವ ವೈಟ್ ಸೀಮೆ ಎಣ್ಣೆ ಬ್ಲೂ ಸೀಮೆಎಣ್ಣೆ ಗಿಂತ 10.ರೂ ದುಬಾರಿ.
ಖನಿಜ ತೈಲದಿಂದ ಪಡೆಯಲಾಗುವ ಸೀಮೆ ಎಣ್ಣೆಯನ್ನು (ಹೈಡ್ರೊಕಾರ್ಬನ್ ದ್ರವ) ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಕೈಗಾರಿಕೆ ಜೊತೆಗೆ ಮನೆಗಳಲ್ಲಿ ಅಡುಗೆ ಮತ್ತು ದೀಪದ ಇಂಧನವಾಗಿ ಮಾತ್ರವಲ್ಲದೆ ಮೋಟರ್‍ಗಳ ಚಲನೆಗೆ ಪ್ರಮುಖ ಇಂಧನವನ್ನಾಗಿ ಬಳಸಲಾಗುತ್ತದೆ.ಗ್ರಹ ಬಳಕೆಗಾಗಿ ಹಾಗೂ ಮೀನುಗಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ರೇಷನ್ ಪದ್ಧತಿಯಲ್ಲಿ ಭಾರತ ಸರಕಾರ ಈ ಹಿಂದೆ ಸಬ್ಸಿಡಿ ರೂಪದಲ್ಲಿ ಬ್ಲೂ ಸೀಮೆಎಣ್ಣೆಯನ್ನು ಪೂರೈಕೆ ಮಾಡುತ್ತಿತ್ತು.
ಸೀಮೆಎಣ್ಣೆ ಮೇಲಿನ ಸಬ್ಸಿಡಿ ಹೆಚ್ಚಳಕ್ಕೆ ಆಗ್ರಹ:ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ತೆಗೆದು ಹಾಕಿದ್ದರಿಂದ ಪ್ರಸ್ತುತ ರಾಜ್ಯ ಸರಕಾರ ಸಬ್ಸಿಡಿ ರೂಪದಲ್ಲಿ ವೈಟ್ ಸೀಮೆಎಣ್ಣೆಯನ್ನು ನೀಡುತ್ತಿದೆ.ಬ್ಲೂ ಸೀಮೆಎಣ್ಣೆ ಕ್ಕಿಂತ ವೈಟ್ ಸೀಮೆಎಣ್ಣೆ ದುಬಾರಿಯಾಗಿರುವುದರಿಂದ ಮೀನುಗಾರರಿಗೆ ಹೊರೆಯಾಗಿದೆ.ಅನಿವಾರ್ಯ ಕಾರಣದಿಂದ ಲೀಟರ್ ಮೇಲೆ ಹೆಚ್ಚುವರಿಯಾರಿ 10.ರೂ ನೀಡಿ ಕೊಂಡುಕೊಳ್ಳಬೇಕು.ಮೀನಿನ ಇಳುವರಿ ಕುಂಠಿತ,ಪ್ರತಿಕೂಲ ಹಾವಾಮಾನದಿಂದ ಕಂಗೆಟ್ಟಿರುವ ಮೀನುಗಾರರು ತೈಲ ದರದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.ಪ್ರಸ್ತುತ ನೀಡುತ್ತಿರುವ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ಕನಿಷ್ಠ 10.ರೂ ಏರಿಕೆ ಮಾಡುವಂತೆ ಮೀನುಗಾರರು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.ಹಿಂದೆ ರೇಷನ್ ವ್ಯವಸ್ಥೆಯಡಿಯಲ್ಲಿ ನೀಡುತ್ತಿದ್ದ ಬ್ಲೂ ಸೀಮೆಎಣ್ಣೆ ಕಡಿಮೆ ದರದಲ್ಲಿ ಮೀನುಗಾರರಿಗೆ ದೊರಕುತ್ತಿತ್ತು.
ಮೋಟರ್ ಇಂಜಿನ್ ಖರೀದಿಸಲು ಸಬ್ಸಿಡಿ ಹಣ ಘೋಷಣೆ:ಬ್ಲೂ ಸೀಮೆಎಣ್ಣೆ ಮೇಲಿನ ಸಬ್ಸಿಡಿಯನ್ನು ತೆಗೆದು ಹಾಕಿದ ಬಳಿಕ ಕೇಂದ್ರ ಸರಕಾರ ಮೀನುಗಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಬಳಕೆ ಮಾಡುವಂತೆ ಉತ್ತೇಜಿಸಿ ವಿಶೇಷವಾದ ಯೋಜನೆಗಳನ್ನು ಘೋಷಿಸಿದೆ.ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್‍ಅನ್ನು ಖರೀದಿಸುವ ಫಲಾನುಭವಿ ಮೀನುಗಾರರಿಗೆ ಸರಕಾರ ಘೋಷಣೆ ಮಾಡಿರುವಂತೆ 50,000.ರೂ ಸಬ್ಟಿಡಿ ಹಣ ದೊರಕಲಿದೆ.ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಮೀನುಗಾರರು ಅರ್ಜಿಯನ್ನು ಹಾಕಬೇಕು.
ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಬಳಕೆ ಮೇಲೆ ನಿರಾಶಕ್ತಿ:ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಓಡಿಸಲು ಸರಿ ಸುಮಾರು 1 ಲೀಟರ್ ಪೆಟ್ರೋಲ್‍ಗೆ 300 ಮೀಲಿ ತೈಲ ಮಿಶ್ರಣ ಮಾಡಬೇಕು.ಲೀಟರ್ ಒಂದರ ಮೇಲಿನ ವೆಚ್ಚ ಅಂದಾಜು 162.ರೂ ತಗಲುತ್ತದೆ ಎಂದು ಮೀನುಗಾರರು ಹೇಳುತ್ತಾರೆ.ಪೆಟ್ರೋಲ್‍ಗೆ ಯಾವುದೇ ರೀತಿಯ ಸಬ್ಸಿಡಿ ಸರಕಾರ ನೀಡದೆ ಇರುವುದರಿಂದ ಇದು ಮೀನುಗಾರರಿಗೆ ಹೊರೆ ಆಗಲಿದೆ.ಇಂಜಿನ್ ಖರೀದಿಗೆ ಸರಕಾರ 50,000.ರೂ ಹಣ ನೀಡಿದ್ದರು.ಪೆಟ್ರೋಲ್ ಚಾಲಿತ ಮೋಟರ್ ಇಂಜಿನ್ ಖರೀದಿಗೆ ಮೀನುಗಾರರು ನಿರಾಶಕ್ತಿ ತೋರಿಸುತ್ತಿದ್ದಾರೆ.ಸೀಮೆಎಣ್ಣೆ ಮತ್ತು ಪೆಟ್ರೋಲ್ ದರ ಅಜಗಜಾಂತರ ವ್ಯತ್ಯಾಸವಿರುವುದೆ ಕಾರಣವಾಗಿದೆ.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

19 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

20 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

23 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago