ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಾಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೆನರಾ ಬ್ಯಾಂಕ್ ಮರವಂತೆ ಶಾಖೆ ಮ್ಯಾನೇಜರ್ ಮುಂಬಯಿ ಮೂಲದ ನಿವಾಸಿ ರಾಹುಲ್ ಬಾಲಕೃಷ್ಣ ರಂಖಬ್ಮೆ ಎನ್ನುವ ವ್ಯಕ್ತಿ ಶನಿವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಬೈಂದೂರು ಕಡೆಯಿಂದ ಕುಂದಾಪುರ ಕಡೆಯಿಂದ ಸಾಗುತ್ತಿದ್ದ ಕೇರಳ ನೋಂದಣಿ ಹೊಂದಿರುವ ಲಾರಿ ಅರಾಟೆ ಬಳಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಸವಾರ ಬ್ಯಾಂಕ್ ಉದ್ಯೋಗಿ ರಾಹುಲ್ ಬಾಲಕೃಷ್ಣ ರಂಖಬ್ಮೆ ಅವರು ಸಾವನ್ನಪ್ಪಿದ್ದಾರೆ.ಅತ್ಯಂತ ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಉತ್ತಮ ಸೇವೆ ನೀಡುವುದರ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು.
ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ.ಗಾಡಿಯನ್ನು ಅಡ್ಡಗಟ್ಟಲು ಸ್ಥಳೀಯರು ಬೈನ್ನಟ್ಟಿ ಹೋದ ಸಮಯದಲ್ಲಿ ಲಾರಿ ಚಾಲಕ ತನ್ನ ಲಾರಿಯನ್ನು ಹೆಮ್ಮಾಡಿ ಪೇಟೆಯೊಳಗೆ ನುಗ್ಗಿಸಿ ಪುನಃ ಬೈಂದೂರು ಕಡೆಗೆ ಸಾಗುವ ರಸ್ತೆಯಲ್ಲಿ ಸಾಗಿ ಬಂದು ಮುಳ್ಳಿಕಟ್ಟೆ ಡಿವೈಡರ್ ಒಳಗೆ ರಾಂಗ್ ಸೈಡ್ನಲ್ಲಿ ತನ್ನ ಗಾಡಿಯನ್ನು ನುಗ್ಗಿಸಿ ಪರಾರಿಯಾಗಲು ಯತ್ನಿಸಿದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಾಷ್ಟ್ರೀಯ ಹೆದ್ದಾರಿ ಚರಂಡಿ ಯೊಳಗೆ ಸಿಲುಕೊಂಡಿದೆ.ಪರಿಣಾಮ ಲಾರಿ ಮುಂದೆ ಚಲಿಸದೆ ಸಿಕ್ಕಿ ಹಾಕಿ ಕೊಂಡಿತ್ತು.ಕ್ರೈನ್ ಮೂಲಕ ಲಾರಿಯನ್ನು ಮೇಲಕ್ಕೆ ಎತ್ತಲಾಯಿತು.ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಇಬ್ರಾಹಿಂ ಗಂಗೊಳ್ಳಿ ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆ ಸಾಗಿಸಲು ಸಹಕರಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…