ಕುಂದಾಪುರ:ಬ್ಯಾಂಕ್ನಿಂದ ಗ್ರಾಹರಿಗೆ ಸಿಗಬೇಕಾದಂತಹ ಸೌಲಭ್ಯಗಳನ್ನು ಯಾವುದೇ ರೀತಿ ಮುಚ್ಚು ಮರೆ ಇಲ್ಲದೆ ತುಂಬು ಉತ್ಸುಕತೆಯಿಂದ ನೀಡುವುದರ ಮೂಲಕ ನಿಯಮಗಳನ್ನು ಸಡಿಲಿಕೆ ಮಾಡಿಕೊಂಡು ಉತ್ತಮವಾದ ಸೇವೆಯನ್ನು ಜನರಿಗೆ ನೀಡುತ್ತಿದ್ದ ಮರವಂತೆ ಕೆನರಾ ಬ್ಯಾಂಕ್ ಶಾಖೆ ಮ್ಯಾನೇಜರ್ ರಾಹುಲ್ ಬಾಲಕೃಷ್ಣ ಅವರ ಅಕಾಲಿಕ ಸಾವು ಮರವಂತೆ ಗ್ರಾಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹಿರಿಯ ಪತ್ರಕರ್ತರಾದ ಎಸ್.ಜನಾರ್ದನ ಮರವಂತೆ ಹೇಳಿದರು.
ಕೆನರಾ ಬ್ಯಾಂಕ್ ಮರವಂತೆ ಶಾಖೆಯಲ್ಲಿ ಸೋಮವಾರ ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಅಕಾಲಿಕವಾಗಿ ನಿಧನರಾದ ಮುಂಬಯಿ ಮೂಲದ ನಿವಾಸಿ ರಾಹುಲ್ ಬಾಲಕೃಷ್ಣ ಅವರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಮರವಂತೆ ಗ್ರಾ.ಪಂ ಅಧ್ಯಕ್ಷ ಲೋಕೇಶ್ ಖಾರ್ವಿ,ಮಾಜಿ ಅಧ್ಯಕ್ಷರಾದ ರುಕ್ಮಿಣಿ ಮತ್ತು ಅನಿತಾ ಆರ್.ಕೆ,ಸತೀಶ ಪೂಜಾರಿ,ದಯಾನಂದ ಬಳೆಗಾರ್,ರವಿ ಮಡಿವಾಳ,ಸುಬ್ರಹ್ಮಣ್ಯ ಪಡುಕೋಣೆ,ಮರವಂತೆ ಹೈಸ್ಕೂಲ್ ಮುಖ್ಯೋಪಾಧ್ಯಾಯ ಸರ್ವತ್ತೋಮ ಭಟ್,ಶಾಖಾ ಮ್ಯಾನೇಜರ್ ಸುಧೀರ್ ನುಡಿನಮನ ಸಲ್ಲಿಸಿದರು.ಬ್ಯಾಂಕ್ ಸಿಬ್ಬಂದಿಗಳು,ಪಂಚಾಯತ್ ಸಿಬ್ಬಂದಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.
ಕೆನರಾ ಬ್ಯಾಂಕ್ ಮರವಂತೆ ಶಾಖೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ ಮುಂಬಯಿ ಮೂಲದ ನಿವಾಸಿ ರಾಹುಲ್ ಬಾಲಕೃಷ್ಣ ಅವರು ಶನಿವಾರ ಅರಾಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…