ಕುಂದಾಪುರ

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಪೂರ್ವ ಮಾಹಿತಿ ಕಾರ್ಯಕ್ರಮ ‘ಪುಷ್ಟಿ’ 2024

Share

Advertisement
Advertisement
Advertisement

ನಾವುಂದ:ಶುಭದಾ ಆಂಗ್ಲ ಮಾಧ್ಯಮ ಶಾಲೆ ನಾವುಂದದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್‌. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಮಾಹಿತಿ ‘ಪುಷ್ಟಿ’ 2024 ಕಾರ್ಯಕ್ರಮ ನಡೆಯಿತು.
ಸಮರ್ಪಣಾ ಎಜುಕೇಶನಲ್ ಟ್ರಸ್ಟ್ (ರಿ)ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲಿ ಹತ್ತನೇ ತರಗತಿ ಪ್ರಮುಖವಾದ ಕಾಲಘಟ್ಟವಾಗಿದ್ದು ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕಲಿಕೆ ಅತ್ಯುತ್ತಮವಾಗಬೇಕು ಓದುವ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚಾಗಬೇಕು.ವಿದ್ಯಾರ್ಥಿಗಳೇ ಸಮಯ ವ್ಯರ್ಥ ಮಾಡದೇ ಓದಿ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಶಿಕ್ಷಕರಾದ ಕರುಣಾಕರ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ,ಪರೀಕ್ಷಾ ಪೂರ್ವ ತಯಾರಿಯ ಕುರಿತು ಮಾಹಿತಿಯನ್ನು ನೀಡಿದರು. ಜನತಾ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಶುಭದಾ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕರಾದ ರವಿದಾಸ್ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು,ಜನತಾ ಕಾಲೇಜಿನ ಉಪನ್ಯಾಸಕರಾದ ಉಮೇಶ್ ನಾಯ್ಕ್ ಸ್ವಾಗತಿಸಿದರು,ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ,ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

7 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago